ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು...

ಅಟ್ಲಾಂಟ ಕನ್ನಡಿಗರಿಂದ ಅದ್ದೂರಿಯ ಯುಗಾದಿ ಸಂಭ್ರಮಾಚರಣೆ; ಸಂಗೀತ ಪ್ರಿಯರನ್ನು ತಲೆದೂಗುವಂತೆ ಮಾಡಿದ ರಾಜೇಶ್ ಕೃಷ್ಣನ್ ಹಾಡು

ಅಮೆರಿಕಾದ ಅಟ್ಲಾಂಟ ಕನ್ನಡಿಗರು ಮೇ 4ರಂದು ರವಿವಾರ ಅದ್ದೂರಿಯಾಗಿ ಯುಗಾದಿ ಹಾಗೂ ಕನ್ನಡ ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿಕೊಂಡರು.

ನೃಪತುಂಗ ಕನ್ನಡ ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ ಸಂಗೀತ ಸಂಜೆ ಮುಖ್ಯ ಆಕರ್ಷಣೆಯಾಗಿತ್ತು.

ಕನ್ನಡ ಶಾಲೆಯ ಶಿಕ್ಷಕರು ಮತ್ತು ಮಕ್ಕಳು

ಕಾರ್ಯಕ್ರಮದ ಒಂದು ವಾರದ ಮುಂಚೆಯೇ ಟಿಕೆಟ್ “ಸೋಲ್ಡ್ ಔಟ್” ಆಗಿದ್ದು ಕನ್ನಡಿಗರು ತಮ್ಮ ನೆಚ್ಚಿನ ಗಾಯಕನ ಹಾಡುಗಳನ್ನು ಸಂತೋಷದಿಂದ ಆನಂದಿಸಿದರು. ರಾಜೇಶ್ ಕೃಷ್ಣನ್ ತಮ್ಮ ಸುಮಧುರ ಗಾಯನ, ನಗು, ಪ್ರೀತಿಯಿಂದ ಅಭಿಮಾನಿಗಳ ಹೃದಯ ಗೆದ್ದರು. ಅಷ್ಟೇ ಅಲ್ಲದೆ ಪ್ರೋತ್ಸಾಹ ನೀಡಲು ಅಟ್ಲಾಂಟದ ಸ್ಥಳೀಯ ಪ್ರತಿಭೆಗಳನ್ನು ಸಹ ತಮ್ಮ ಜೊತೆ ಹಾಡಿಸಿ ಕನ್ನಡಿಗರ ಮನ ಗೆದ್ದರು.

ಸ್ಥಳೀಯ ಗಾಯಕರೊಂದಿಗೆ ಮನರಂಜಿಸಿದ ರಾಜೇಶ್ ಕೃಷ್ಣನ್

ಸ್ಥಳೀಯ ಪ್ರತಿಭೆಗಳಿಂದ ನೃತ್ಯ, ಗಾಯನ, ನಾಟಕಗಳನ್ನು ಆಯೋಜಿಸಲಾಗಿತ್ತು. ಕನ್ನಡ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡಿಗರು ಭಾಗವಹಿಸಿ ಸಂತೋಷಪಟ್ಟರು. ಕೆ.ಆರ್.ಶ್ರೀನಾಥ್ ಅವರು ಕಾರ್ಯಕ್ರಮದಲ್ಲಿ ಕನ್ನಡ ಪ್ರಶ್ನಾವಳಿ ಕಾರ್ಯಕ್ರಮ ನಡೆಸಿಕೊಟ್ಟರು. ಕನ್ನಡ ಕೂಟ ತಂಡದವರು ಶ್ರಮವಹಿಸಿ ಇಡೀ ದಿನದ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಭರ್ಜರಿ ಭೋಜನದ ವ್ಯವಸ್ಥೆಯನ್ನು ಸಹ ಮಾಡಿದ್ದರು.

ವರದಿ: ಕೆ.ಆರ್.ಶ್ರೀನಾಥ್, ಅಟ್ಲಾಂಟ

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories