ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ: ಅಟ್ಲಾಂಟಾದ ಕನ್ನಡಿಗರ ನೃಪತುಂಗ ಕನ್ನಡ ಕೂಟ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಗಳು ಫೆ. 8 ಶನಿವಾರ ಜಾರ್ಜಿಯಾದ ಅಟ್ಲಾಂಟಾದಲ್ಲಿ ನಡೆಯಿತು.    

ರಂಗೋಲಿ ಸ್ಪರ್ಧೆ, ಚಿಣ್ಣರಿಂದ ಚಿತ್ರ ಬಿಡಿಸುವ ಸ್ಪರ್ಧೆ, ಚೆಸ್ ಸ್ಪರ್ಧೆ, ಪ್ರಶ್ನಾವಳಿ ಸ್ಪರ್ಧೆ, ಅಂತಾಕ್ಷರಿ, ಗಾಯನ, ನೃತ್ಯ ಹೀಗೆ ಹಲವು ಸ್ಪರ್ಧೆಗಳಿದ್ದವು.

ಕರ್ನಾಟಕದಿಂದ ಬಂದಿದ್ದ ರಾಘವೇಂದ್ರ ಆಚಾರ್ಯ ಅವರ ಸ್ಟ್ಯಾಂಡ್ ಅಪ್ ಕಾಮೆಡಿ ಹಾಗೂ ಅಟ್ಲಾಂಟದ ಕನ್ನಡತಿ ಮಹಿಮಾ ಹೊಳ್ಳ ಅವರು ಅದ್ಭುತ ಭರತನಾಟ್ಯ ಪ್ರದರ್ಶನ ನಡೆಯಿತು.  

ಇದೇ ಸಂದರ್ಭದಲ್ಲಿ ಅಟ್ಲಾಂಟ ನಗರದ ವಿವಿಧ ಭಾಗದಲ್ಲಿ ಸ್ವಯಂ ಸೇವಾ ಮನೋಭಾವದಿಂದ ವಾರಾಂತ್ಯದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ಸುಮಾರು 10 ಕನ್ನಡ ಶಾಲೆಗಳನ್ನು ನಡೆಸುವ ಎಲ್ಲಾ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕನ್ನಡ ಕೂಟ ತಂಡದಿಂದ ಉತ್ತಮ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories