ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ: ಅಟ್ಲಾಂಟಾದ ಕನ್ನಡಿಗರ ನೃಪತುಂಗ ಕನ್ನಡ ಕೂಟ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಗಳು ಫೆ. 8 ಶನಿವಾರ ಜಾರ್ಜಿಯಾದ ಅಟ್ಲಾಂಟಾದಲ್ಲಿ ನಡೆಯಿತು.    

ರಂಗೋಲಿ ಸ್ಪರ್ಧೆ, ಚಿಣ್ಣರಿಂದ ಚಿತ್ರ ಬಿಡಿಸುವ ಸ್ಪರ್ಧೆ, ಚೆಸ್ ಸ್ಪರ್ಧೆ, ಪ್ರಶ್ನಾವಳಿ ಸ್ಪರ್ಧೆ, ಅಂತಾಕ್ಷರಿ, ಗಾಯನ, ನೃತ್ಯ ಹೀಗೆ ಹಲವು ಸ್ಪರ್ಧೆಗಳಿದ್ದವು.

ಕರ್ನಾಟಕದಿಂದ ಬಂದಿದ್ದ ರಾಘವೇಂದ್ರ ಆಚಾರ್ಯ ಅವರ ಸ್ಟ್ಯಾಂಡ್ ಅಪ್ ಕಾಮೆಡಿ ಹಾಗೂ ಅಟ್ಲಾಂಟದ ಕನ್ನಡತಿ ಮಹಿಮಾ ಹೊಳ್ಳ ಅವರು ಅದ್ಭುತ ಭರತನಾಟ್ಯ ಪ್ರದರ್ಶನ ನಡೆಯಿತು.  

ಇದೇ ಸಂದರ್ಭದಲ್ಲಿ ಅಟ್ಲಾಂಟ ನಗರದ ವಿವಿಧ ಭಾಗದಲ್ಲಿ ಸ್ವಯಂ ಸೇವಾ ಮನೋಭಾವದಿಂದ ವಾರಾಂತ್ಯದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ಸುಮಾರು 10 ಕನ್ನಡ ಶಾಲೆಗಳನ್ನು ನಡೆಸುವ ಎಲ್ಲಾ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕನ್ನಡ ಕೂಟ ತಂಡದಿಂದ ಉತ್ತಮ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories