ಯುಎಸ್‌ಎಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ ಕನ್ನಡಿಗರಿಂದ ಸಂಭ್ರಮದ ಸಂಕ್ರಾಂತಿ ಕಾರ್ಯಕ್ರಮ

ಅಟ್ಲಾಂಟ: ಅಟ್ಲಾಂಟಾದ ಕನ್ನಡಿಗರ ನೃಪತುಂಗ ಕನ್ನಡ ಕೂಟ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದ ಕಾರ್ಯಕ್ರಮಗಳು ಫೆ. 8 ಶನಿವಾರ ಜಾರ್ಜಿಯಾದ ಅಟ್ಲಾಂಟಾದಲ್ಲಿ ನಡೆಯಿತು.    

ರಂಗೋಲಿ ಸ್ಪರ್ಧೆ, ಚಿಣ್ಣರಿಂದ ಚಿತ್ರ ಬಿಡಿಸುವ ಸ್ಪರ್ಧೆ, ಚೆಸ್ ಸ್ಪರ್ಧೆ, ಪ್ರಶ್ನಾವಳಿ ಸ್ಪರ್ಧೆ, ಅಂತಾಕ್ಷರಿ, ಗಾಯನ, ನೃತ್ಯ ಹೀಗೆ ಹಲವು ಸ್ಪರ್ಧೆಗಳಿದ್ದವು.

ಕರ್ನಾಟಕದಿಂದ ಬಂದಿದ್ದ ರಾಘವೇಂದ್ರ ಆಚಾರ್ಯ ಅವರ ಸ್ಟ್ಯಾಂಡ್ ಅಪ್ ಕಾಮೆಡಿ ಹಾಗೂ ಅಟ್ಲಾಂಟದ ಕನ್ನಡತಿ ಮಹಿಮಾ ಹೊಳ್ಳ ಅವರು ಅದ್ಭುತ ಭರತನಾಟ್ಯ ಪ್ರದರ್ಶನ ನಡೆಯಿತು.  

ಇದೇ ಸಂದರ್ಭದಲ್ಲಿ ಅಟ್ಲಾಂಟ ನಗರದ ವಿವಿಧ ಭಾಗದಲ್ಲಿ ಸ್ವಯಂ ಸೇವಾ ಮನೋಭಾವದಿಂದ ವಾರಾಂತ್ಯದಲ್ಲಿ ಮಕ್ಕಳಿಗೆ ಕನ್ನಡ ಕಲಿಸುವ ಸುಮಾರು 10 ಕನ್ನಡ ಶಾಲೆಗಳನ್ನು ನಡೆಸುವ ಎಲ್ಲಾ ಶಿಕ್ಷಕರನ್ನೂ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಕನ್ನಡ ಕೂಟ ತಂಡದಿಂದ ಉತ್ತಮ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories