ಬಹರೈನ್ಬಹರೈನ್; ಯಕ್ಷಧ್ರುವ ಪಟ್ಲ ಫೌಂಡೇಶನ್‌ನ 'ಪಂಚ ವಾರ್ಷಿಕ ಪಟ್ಲ...

ಬಹರೈನ್; ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ‘ಪಂಚ ವಾರ್ಷಿಕ ಪಟ್ಲ ಯಕ್ಷ ವೈಭವ 2025’ಕ್ಕೆ ಕ್ಷಣಗಣನೆ ಆರಂಭ: ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

ಬಹರೈನ್: ನೊಂದ, ಅಶಕ್ತ ಹಾಗು ಬಡ ಯಕ್ಷಗಾನ ಕಲಾವಿದರ ಕಲ್ಯಾಣಕ್ಕಾಗಿಯೇ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ದೇಶ ವಿದೇಶಗಳಲ್ಲಿ ನೂರಾರು ಘಟಕಗಳನ್ನು ಹೊಂದಿದ್ದು, ಅದರ ಬಹರೈನ್ ಮತ್ತು ಸೌದಿ ಘಟಕವು ಇದೀಗ ಐದನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ.

ಈ ಐದನೇ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು “ಪಂಚ ವಾರ್ಷಿಕ ಪಟ್ಲ ಯಕ್ಷ ವೈಭವ 2025” ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಅಕ್ಟೋಬರ್ 31ರ ಶುಕ್ರವಾರದಂದು ಮಧ್ಯಾಹ್ನ 2 ಗಂಟೆಯಿಂದ ಕನ್ನಡ ಸಂಘ ಬಹರೈನ್‌ನ ಆಶ್ರಯದಲ್ಲಿ ಕನ್ನಡ ಭವನದ ಸಭಾಂಗಣದಲ್ಲಿ ನಾಡಿನ ಮೇರು ಕಲಾವಿದರು ಹಾಗು ದ್ವೀಪದ ಯಕ್ಷ ಕಲಾವಿದರುಗಳ ಸಮಾಗಮದೊಂದಿಗೆ “ಶ್ರೀ ದೇವಿ ಮಹಾತ್ಮೆ” ಎನ್ನುವ ಯಕ್ಷಗಾನ ಪ್ರಸಂಗವು ರಂಗದಲ್ಲಿ ಪ್ರದರ್ಶನಗೊಳ್ಳಲಿದೆ.

“ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಬಹರೈನ್-ಸೌದಿ ಘಟಕದ ಅಧ್ಯಕ್ಷ ದೀಪಕ್ ಪೇಜಾವರ ಅಧ್ಯಕ್ಕ್ಷತೆಯಲ್ಲಿ ಜರಗುವ ಈ ಯಕ್ಷಗಾನ ಪ್ರದರ್ಶನದಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್‌ನ ಸ್ಥಾಪಕರೂ ಪ್ರಸಿದ್ಧ ಭಾಗವತರೂ ಆಗಿರುವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಪಾಲ್ಗೊಂಡು ತಮ್ಮ ಕಂಚಿನ ಕಂಠದ ಭಾಗವತಿಕೆಯಿಂದ ದ್ವೀಪದ ಯಕ್ಷಪ್ರೇಮಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ನಾಡಿನ ಯಕ್ಷಲೋಕದ ಮೇರು ಕಲಾವಿದರಾದ ದಿವಾಕರ ರೈ, ಮನೀಶ್ ಪಾಟಾಳಿ, ಮಾನ್ಯ ಸಂತೋಷ್, ನರೇಂದ್ರ ಸುವರ್ಣ, ಸೂರಜ್ ಆಚಾರ್ಯ, ಮಯೂರ ನಾಯ್ಕ ಮತ್ತು ಶಿವಾನಂದ ಶೆಟ್ಟಿ ಪೆರ್ಲ ಮುಂತಾದವರು ಹಿಮ್ಮೇಳ ಹಾಗು ಮುಮ್ಮೇಳದಲ್ಲಿ ತಮ್ಮ ಕಲಾನೈಪುಣ್ಯತೆಯನ್ನು ಮೆರೆಯಲಿದ್ದು, ದ್ವೀಪದ ಯಕ್ಷಕಲಾವಿದರುಗಳು ತಮ್ಮ ಪ್ರತಿಭೆಯನ್ನು ರಂಗದಲ್ಲಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಈ ಪಂಚ ವಾರ್ಷಿಕ ಪಟ್ಲ ಯಕ್ಷ ವೈಭವವು ದ್ವೀಪದ ಯಕ್ಷಲೋಕದ ಇತಿಹಾಸದಲ್ಲಿ ಇನ್ನೊಂದು ಮೈಲುಗಲ್ಲಾಗಲಿದ್ದು ,ಈ ಸಾಂಸ್ಕ್ರತಿಕ ವೈಭವಕ್ಕೆ ದ್ವೀಪದ ಎಲ್ಲಾ ಯಕ್ಷಪ್ರೇಮಿಗಳಿಗೂ ಪ್ರವೇಶ ಉಚಿತವಾಗಿದೆ. ಕಾರ್ಯಕ್ರಮದ ಹೆಚ್ಚಿನ ವಿವರಗಳಿಗೆ ಮೋಹನ್ ಎಡನೀರ್ ಇವರನ್ನು ದೂರವಾಣಿ ಸಂಖ್ಯೆ 00973-36729116 ಮೂಲಕ ಸಂಪರ್ಕಿಸಬಹುದು.

ವರದಿ-ಕಮಲಾಕ್ಷ ಅಮೀನ್

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories