ಇತರೆಕೆನಡಾದಲ್ಲಿ ಮಂಗಳೂರಿನ ಯುವಕರಿಂದ 'ಬ್ಯಾರೀಸ್ ಸೂಪರ್ ಮಾರ್ಕೆಟ್' ಆರಂಭ

ಕೆನಡಾದಲ್ಲಿ ಮಂಗಳೂರಿನ ಯುವಕರಿಂದ ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಆರಂಭ

ಟೊರೊಂಟೊ(ಕೆನಡಾ): ಕೆನಡಾದಲ್ಲಿ ಮಂಗಳೂರಿನ 3 ಮಂದಿ ಬ್ಯಾರಿ ಯುವಕರು ಒಟ್ಟು ಸೇರಿ ಹೊಸ ಸಂಸ್ಥೆಯೊಂದನ್ನು ಪ್ರಾರಂಭಿಸುತ್ತಿದ್ದಾರೆ. ಅದಕ್ಕೆ ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಎಂದು ನಾಮಕರಣ ಮಾಡಿದ್ದಾರೆ. ಕೆನಡಾದ ಟೊರೊಂಟೊದ ಮಿಸ್ಸಿಸಗಾದಲ್ಲಿ ಶನಿವಾರ ‘ಬ್ಯಾರೀಸ್‌ ಸೂಪರ್‌ ಮಾರ್ಕೆಟ್’ ಆರಂಭಗೊಂಡಿದ್ದು ಕೆನಡಾದಲ್ಲಿರುವ ಮಂಗಳೂರಿಗರಿಗೆ ಇದೊಂದು ಶುಭ ಸುದ್ದಿಯಾಗಲಿದೆ.

ಬ್ಯಾರೀಸ್ ಸೂಪರ್‌ ಮಾರ್ಕೆಟ್‌ ನ್ನು ಮಂಗಳೂರಿನ ಕಚ್‌ ಮನ್‌ ಹೌಸ್‌ ನ ಹನೀಫ್‌ ಅವರ ಪುತ್ರರಾದ ಹಫೀಝ್ ಅಬ್ದುಲ್ ಖಾದರ್, ಹುಸೈನ್‌(ಯೆರ್ಚಿರೊ ಉಚ್ಚಾಕ) ಅವರ ಪುತ್ರರಾದ ಮುನೀರ್ ಅಹ್ಮದ್, ಡಾ. ಅಶ್ರಫ್‌ ಅವರ ಪುತ್ರರಾದ ಹಾಶಿಮ್ ಅಶ್ರಫ್ ಅವರು ಜೊತೆ ಸೇರಿ ಆರಂಭಿಸಿದ್ದಾರೆ.

ಹಫೀಝ್ ಅಬ್ದುಲ್ ಖಾದರ್ ಮಂಗಳೂರಿನ ಹಿರಿಯ ಪತ್ರಕರ್ತ, ಛಾಯಾಗ್ರಾಹಕ ದಿವಂಗತ ಅಹ್ಮದ್ ಅನ್ವರ್ ಅವರ ಅಳಿಯ. ಉದ್ಯಮ, ಆಹಾರ ಕ್ಷೇತ್ರ ಹಾಗು ಗ್ರಾಹಕ ಸೇವೆಯಲ್ಲಿ ಅನುಭವ ಇರುವ ಈ 3 ಮಂದಿ ಮಿತ್ರರು ಸೇರಿ ಕೆನಡಾದಲ್ಲಿರುವ ಮಂಗಳೂರು ಸುತ್ತಮುತ್ತಲ ಜನರಿಗೆ ಅವರ ತವರಿನ ತಿಂಡಿ, ತಿನಿಸುಗಳು, ಮಸಾಲೆ ಪದಾರ್ಥಗಳನ್ನು ಒದಗಿಸುವ ಉದ್ದೇಶದ ಜೊತೆಗೆ ಕೆನಡಾದ ಜನತೆಗೂ ತುಳುನಾಡಿನ ಆಹಾರ ಸಂಸ್ಕೃತಿಯನ್ನು ಪರಿಚಯಿಸಲು ಮುಂದಾಗಿದ್ದಾರೆ.

‘ಬ್ಯಾರೀಸ್ ಸೂಪರ್ ಮಾರ್ಕೆಟ್’ನಲ್ಲಿ ದಿನಸಿ ವಸ್ತುಗಳು, ಕರಾವಳಿಯ ನೆಚ್ಚಿನ ಖಾದ್ಯಗಳು ಲಭ್ಯವಾಗಲಿವೆ. ಗ್ರಾಹಕರಿಗೆ ಅಗತ್ಯ ಅಡುಗೆ ಸಾಮಾಗ್ರಿಗಳು, ಮಸಾಲೆ ಪದಾರ್ಥಗಳು ಇನ್ನಿತರ ವಸ್ತುಗಳು ಸಿಗಲಿವೆ. ಜೊತೆಗೆ ಮಂಗಳೂರಿನ ಹೆಸರಾಂತ ಖಾದ್ಯಗಳಾದ ಸುಕ್ಕ, ಪುಳಿಮುಂಚಿ, ಕೋರಿ ರೊಟ್ಟಿ, ಗೋಳಿ ಬಜೆ, ಮಂಗಳೂರು ಬನ್ಸ್, ಪತ್ರೋಡೆ, ನೀರು ದೋಸೆ, ಖಾರಾ ರೊಟ್ಟಿ, ಬಾಳೆಹಣ್ಣಿನ ವಿವಿಧ ಖಾದ್ಯಗಳು ಇಲ್ಲಿ ಸಿಗಲಿವೆ. ಬ್ಯಾರೀಸ್ ಸೂಪರ್‌ ಮಾರ್ಕೆಟ್ ಮಂಗಳೂರಿಗರಿಗೆ ರೆಡಿ ಟು ಈಟ್ ಖಾದ್ಯಗಳ ಜೊತೆಗೆ ಕರಾವಳಿ ಕರ್ನಾಟಕದ ವಿಶಿಷ್ಟ ರುಚಿಯ ಖಾದ್ಯಗಳನ್ನು ಕೆನಡಾದ ಜನರಿಗೆ ಪರಿಚಯಿಸಲಿದೆ.

ಬ್ಯಾರೀಸ್ ಸೂಪರ್‌ ಮಾರ್ಕೆಟ್ ಕೇವಲ ವ್ಯವಹಾರ ದೃಷ್ಟಿಯಿಂದ ಆರಂಭಿಸಿದ್ದಲ್ಲ, ಇದೊಂದು ಸಾಂಸ್ಕೃತಿಕ ಕೇಂದ್ರವಾಗಿಯೂ ಕಾರ್ಯನಿರ್ವಹಿಸಲಿದೆ ಎಂದು ಇದರ ಪಾಲುದಾರರು ಪ್ರತಿಕ್ರಿಯಿಸಿದ್ದಾರೆ. ಈ ಸೂಪರ್ ಮಾರ್ಕೆಟ್ ನಲ್ಲಿ ಟೊರಂಟೊದಲ್ಲಿರುವ ಮಂಗಳೂರು ಸುತ್ತಮುತ್ತಲ ಜನರು ಒಂದೆಡೆ ಸೇರಿ ಪರಸ್ಪರ ಕುಶಲೋಪರಿ ನಡೆಸಬಹುದು ಹಾಗು ವಿಷಯ ವಿನಿಮಯ ಮಾಡಿಕೊಳ್ಳುವ ಜೊತೆಗೆ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಹಕಾರಿಯಾಗಿದೆ.

ಬ್ಯಾರೀಸ್ ಸೂಪರ್ ಮಾರ್ಕೆಟ್ ನ ಪ್ರಾರಂಭವು ಕೆನಡಾದಲ್ಲಿ ಹೆಚ್ಚುತ್ತಿರುವ ಬ್ಯಾರಿ ಸಮುದಾಯಕ್ಕೂ ಮಹತ್ವದ ಮೈಲಿಗಲ್ಲಾಗಿದೆ. ಕೆನಡಾದಲ್ಲಿ ಬ್ಯಾರಿಗಳ ಸಂಖ್ಯೆ ಹೆಚ್ಚುತ್ತಿದ್ದು ಒಂದು ಬ್ಯಾರಿ ಅಸೋಸಿಯೇಷನ್ ಆಫ್ ಕೆನಡಾ ಕೂಡ ಪ್ರಾರಂಭವಾಗಿದೆ. ಈ ಬ್ಯಾರಿ ಅಸೋಸಿಯೇಷನ್ ಅಲ್ಲಿರುವ ಬ್ಯಾರಿಗಳ ಸಮ್ಮಿಲನ ಹಾಗು ಬ್ಯಾರಿ ಸಾಹಿತ್ಯ, ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಹೊರದೇಶದಲ್ಲಿದ್ದುಕೊಂಡು ಮಂಗಳೂರಿನ ಆಹಾರ ಸಂಸ್ಕೃತಿಯನ್ನು ಆಸ್ವಾದಿಸಲು ಹವಣಿಸುವವರಿಗೆ, ಬ್ಯಾರೀಸ್ ಸೂಪರ್ ಮಾರ್ಕೆಟ್ ಸ್ವಾದಿಷ್ಠ ಖಾದ್ಯಗಳನ್ನು ಉಣಬಡಿಸಲಿದೆ.

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories