ಇತರೆಕೆನಡಾದಲ್ಲಿ ಮಂಗಳೂರಿನ ಯುವಕರಿಂದ 'ಬ್ಯಾರೀಸ್ ಸೂಪರ್ ಮಾರ್ಕೆಟ್' ಆರಂಭ

ಕೆನಡಾದಲ್ಲಿ ಮಂಗಳೂರಿನ ಯುವಕರಿಂದ ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಆರಂಭ

ಟೊರೊಂಟೊ(ಕೆನಡಾ): ಕೆನಡಾದಲ್ಲಿ ಮಂಗಳೂರಿನ 3 ಮಂದಿ ಬ್ಯಾರಿ ಯುವಕರು ಒಟ್ಟು ಸೇರಿ ಹೊಸ ಸಂಸ್ಥೆಯೊಂದನ್ನು ಪ್ರಾರಂಭಿಸುತ್ತಿದ್ದಾರೆ. ಅದಕ್ಕೆ ‘ಬ್ಯಾರೀಸ್ ಸೂಪರ್ ಮಾರ್ಕೆಟ್’ ಎಂದು ನಾಮಕರಣ ಮಾಡಿದ್ದಾರೆ. ಕೆನಡಾದ ಟೊರೊಂಟೊದ ಮಿಸ್ಸಿಸಗಾದಲ್ಲಿ ಶನಿವಾರ ‘ಬ್ಯಾರೀಸ್‌ ಸೂಪರ್‌ ಮಾರ್ಕೆಟ್’ ಆರಂಭಗೊಂಡಿದ್ದು ಕೆನಡಾದಲ್ಲಿರುವ ಮಂಗಳೂರಿಗರಿಗೆ ಇದೊಂದು ಶುಭ ಸುದ್ದಿಯಾಗಲಿದೆ.

ಬ್ಯಾರೀಸ್ ಸೂಪರ್‌ ಮಾರ್ಕೆಟ್‌ ನ್ನು ಮಂಗಳೂರಿನ ಕಚ್‌ ಮನ್‌ ಹೌಸ್‌ ನ ಹನೀಫ್‌ ಅವರ ಪುತ್ರರಾದ ಹಫೀಝ್ ಅಬ್ದುಲ್ ಖಾದರ್, ಹುಸೈನ್‌(ಯೆರ್ಚಿರೊ ಉಚ್ಚಾಕ) ಅವರ ಪುತ್ರರಾದ ಮುನೀರ್ ಅಹ್ಮದ್, ಡಾ. ಅಶ್ರಫ್‌ ಅವರ ಪುತ್ರರಾದ ಹಾಶಿಮ್ ಅಶ್ರಫ್ ಅವರು ಜೊತೆ ಸೇರಿ ಆರಂಭಿಸಿದ್ದಾರೆ.

ಹಫೀಝ್ ಅಬ್ದುಲ್ ಖಾದರ್ ಮಂಗಳೂರಿನ ಹಿರಿಯ ಪತ್ರಕರ್ತ, ಛಾಯಾಗ್ರಾಹಕ ದಿವಂಗತ ಅಹ್ಮದ್ ಅನ್ವರ್ ಅವರ ಅಳಿಯ. ಉದ್ಯಮ, ಆಹಾರ ಕ್ಷೇತ್ರ ಹಾಗು ಗ್ರಾಹಕ ಸೇವೆಯಲ್ಲಿ ಅನುಭವ ಇರುವ ಈ 3 ಮಂದಿ ಮಿತ್ರರು ಸೇರಿ ಕೆನಡಾದಲ್ಲಿರುವ ಮಂಗಳೂರು ಸುತ್ತಮುತ್ತಲ ಜನರಿಗೆ ಅವರ ತವರಿನ ತಿಂಡಿ, ತಿನಿಸುಗಳು, ಮಸಾಲೆ ಪದಾರ್ಥಗಳನ್ನು ಒದಗಿಸುವ ಉದ್ದೇಶದ ಜೊತೆಗೆ ಕೆನಡಾದ ಜನತೆಗೂ ತುಳುನಾಡಿನ ಆಹಾರ ಸಂಸ್ಕೃತಿಯನ್ನು ಪರಿಚಯಿಸಲು ಮುಂದಾಗಿದ್ದಾರೆ.

‘ಬ್ಯಾರೀಸ್ ಸೂಪರ್ ಮಾರ್ಕೆಟ್’ನಲ್ಲಿ ದಿನಸಿ ವಸ್ತುಗಳು, ಕರಾವಳಿಯ ನೆಚ್ಚಿನ ಖಾದ್ಯಗಳು ಲಭ್ಯವಾಗಲಿವೆ. ಗ್ರಾಹಕರಿಗೆ ಅಗತ್ಯ ಅಡುಗೆ ಸಾಮಾಗ್ರಿಗಳು, ಮಸಾಲೆ ಪದಾರ್ಥಗಳು ಇನ್ನಿತರ ವಸ್ತುಗಳು ಸಿಗಲಿವೆ. ಜೊತೆಗೆ ಮಂಗಳೂರಿನ ಹೆಸರಾಂತ ಖಾದ್ಯಗಳಾದ ಸುಕ್ಕ, ಪುಳಿಮುಂಚಿ, ಕೋರಿ ರೊಟ್ಟಿ, ಗೋಳಿ ಬಜೆ, ಮಂಗಳೂರು ಬನ್ಸ್, ಪತ್ರೋಡೆ, ನೀರು ದೋಸೆ, ಖಾರಾ ರೊಟ್ಟಿ, ಬಾಳೆಹಣ್ಣಿನ ವಿವಿಧ ಖಾದ್ಯಗಳು ಇಲ್ಲಿ ಸಿಗಲಿವೆ. ಬ್ಯಾರೀಸ್ ಸೂಪರ್‌ ಮಾರ್ಕೆಟ್ ಮಂಗಳೂರಿಗರಿಗೆ ರೆಡಿ ಟು ಈಟ್ ಖಾದ್ಯಗಳ ಜೊತೆಗೆ ಕರಾವಳಿ ಕರ್ನಾಟಕದ ವಿಶಿಷ್ಟ ರುಚಿಯ ಖಾದ್ಯಗಳನ್ನು ಕೆನಡಾದ ಜನರಿಗೆ ಪರಿಚಯಿಸಲಿದೆ.

ಬ್ಯಾರೀಸ್ ಸೂಪರ್‌ ಮಾರ್ಕೆಟ್ ಕೇವಲ ವ್ಯವಹಾರ ದೃಷ್ಟಿಯಿಂದ ಆರಂಭಿಸಿದ್ದಲ್ಲ, ಇದೊಂದು ಸಾಂಸ್ಕೃತಿಕ ಕೇಂದ್ರವಾಗಿಯೂ ಕಾರ್ಯನಿರ್ವಹಿಸಲಿದೆ ಎಂದು ಇದರ ಪಾಲುದಾರರು ಪ್ರತಿಕ್ರಿಯಿಸಿದ್ದಾರೆ. ಈ ಸೂಪರ್ ಮಾರ್ಕೆಟ್ ನಲ್ಲಿ ಟೊರಂಟೊದಲ್ಲಿರುವ ಮಂಗಳೂರು ಸುತ್ತಮುತ್ತಲ ಜನರು ಒಂದೆಡೆ ಸೇರಿ ಪರಸ್ಪರ ಕುಶಲೋಪರಿ ನಡೆಸಬಹುದು ಹಾಗು ವಿಷಯ ವಿನಿಮಯ ಮಾಡಿಕೊಳ್ಳುವ ಜೊತೆಗೆ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಹಕಾರಿಯಾಗಿದೆ.

ಬ್ಯಾರೀಸ್ ಸೂಪರ್ ಮಾರ್ಕೆಟ್ ನ ಪ್ರಾರಂಭವು ಕೆನಡಾದಲ್ಲಿ ಹೆಚ್ಚುತ್ತಿರುವ ಬ್ಯಾರಿ ಸಮುದಾಯಕ್ಕೂ ಮಹತ್ವದ ಮೈಲಿಗಲ್ಲಾಗಿದೆ. ಕೆನಡಾದಲ್ಲಿ ಬ್ಯಾರಿಗಳ ಸಂಖ್ಯೆ ಹೆಚ್ಚುತ್ತಿದ್ದು ಒಂದು ಬ್ಯಾರಿ ಅಸೋಸಿಯೇಷನ್ ಆಫ್ ಕೆನಡಾ ಕೂಡ ಪ್ರಾರಂಭವಾಗಿದೆ. ಈ ಬ್ಯಾರಿ ಅಸೋಸಿಯೇಷನ್ ಅಲ್ಲಿರುವ ಬ್ಯಾರಿಗಳ ಸಮ್ಮಿಲನ ಹಾಗು ಬ್ಯಾರಿ ಸಾಹಿತ್ಯ, ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸ ಮಾಡುತ್ತಿದೆ. ಹೊರದೇಶದಲ್ಲಿದ್ದುಕೊಂಡು ಮಂಗಳೂರಿನ ಆಹಾರ ಸಂಸ್ಕೃತಿಯನ್ನು ಆಸ್ವಾದಿಸಲು ಹವಣಿಸುವವರಿಗೆ, ಬ್ಯಾರೀಸ್ ಸೂಪರ್ ಮಾರ್ಕೆಟ್ ಸ್ವಾದಿಷ್ಠ ಖಾದ್ಯಗಳನ್ನು ಉಣಬಡಿಸಲಿದೆ.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories