ಯುಎಇಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ...

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ ಕೂಟದಲ್ಲಿ BCF ಅಧ್ಯಕ್ಷ ಡಾ. BK ಯೂಸುಫ್ ಅವರಿಗೆ ತುಂಬೆ ಸಮೂಹ ಸಂಸ್ಥೆಯಿಂದ ʼLIFE TIME ACHIEVEMENT AWARDʼ ನೀಡಿ ಸನ್ಮಾನಿಸಲಾಯಿತು.

ತುಂಬೆ ಗ್ರೂಪ್ ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್ ಅವರು ತುಂಬೆ ಸಂಸ್ಥೆಯ 28ನೇ ವಾರ್ಷಿಕದ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ ಕೂಟ ಏರ್ಪಡಿಸಿದ್ದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಭಾರತದ ಕೌನ್ಸಿಲ್ ಜನರಲ್ ಎಚ್‌.ಇ.ಸತೀಶ್ ಕುಮಾರ್ ಸಿವನ್ ಭಾಗಿಯಾಗಿದ್ದರು. ಯುಎಇಯ ಬ್ಯಾರಿ ಮುಖಂಡರು, ಕನ್ನಡಿಗ ಬಂದುಗಳು, ಉದ್ಯಮಿಗಳು ವಿವಿಧ ಸಮಾಜ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಬಿ.ಕೆ.ಯೂಸುಫ್, BCF ದಶಕಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆ ಮತ್ತು ಮಾನವೀಯ ಸಹಕಾರದ ಹಿಂದೆ ಡಾ.ತುಂಬೆ ಮೊಯ್ದಿನ್ ರವರ ಅಮೂಲ್ಯ ಸಹಕಾರದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಡಾ. ತುಂಬೆ ಮೊಯ್ದಿನ್ ರವರು ಪ್ರತೀ ವರ್ಷ ಆರ್ಥಿಕವಾಗಿ ಹಿಂದುಳಿದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ MBBS ಕೋರ್ಸ್ ಕಲಿಯಲು ಸಂಪೂರ್ಣ ಖರ್ಚನ್ನು ಸ್ಕಾಲರ್ಷಿಪ್ ಅನ್ನು BCF ಮೂಲಕ ನೀಡುವ ಯೋಜನೆಯನ್ನು ಅವರು ಶ್ಲಾಘಿಸಿದರು.

ಈ ಸಂದರ್ಭ ಸಮಾಜ ಸೇವಾಸೇವಕ ಮುಹಮ್ಮದ್ ಮೀರಾನ್ ಅವರನ್ನೂ ಸನ್ಮಾನಿಸಲಾಯಿತು. ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ಡಾ. ತುಂಬೆ ಮೊಯ್ದಿನ್ ಅವರನ್ನೂ ಸನ್ಮಾನಿಸಲಾಯಿತು.

BCF ಸಲಹೆಗಾರ ಗಡಿಯಾರ ಗ್ರೂಪ್ ನ ಮ್ಯಾನೇಜಿಂಗ್ ಡೈರೆಕ್ಟರ್ ಇಬ್ರಾಹಿಂ ಗಡಿಯಾರ್, ನಫೀಸ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಅಬು ಸಾಲಿಹ್, BCF ಉಪಾಧ್ಯಕ್ಷ ಎಂ.ಈ.ಮೂಳೂರು, ಅಬ್ದುಲ್ ಲತೀಫ್ ಮುಲ್ಕಿ, ಅಫಿಕ್ ಹುಸೈನ್, ಅಮೀರುದ್ದೀನ್, ಅಸ್ಲಾಂ ಕಾರಾಜೆ,ಯಾಕೂಬ್ ದೀವ, ಉಸ್ಮಾನ್ ಮೂಳೂರು, ಅಬ್ದುಲ್ ಲತೀಫ್ ಪುತ್ತೂರು, ನಿಯಾಝ್, ಅಶ್ರಫ್ ಸಟ್ಟಿಕಲ್, ಸಮದ್ ಬೀರಾಲಿ, ರಫೀಕ್ ಮುಲ್ಕಿ, ನವಾಝ್‌ ಕೋಟೆಕಾರ್, ಅಮೀರ್ ಹಳೆಯಂಗಡಿ, KNRI ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಫರ್ ಹಾದ್, ವಿಘ್ನೇಶ್, ಡಾ.ಬಂಗೇರ, BCF Ladies Wing ಹಾಗೂ ಇತರ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories