ಯುಎಇದುಬೈ; 'ಬ್ಯಾರೀಸ್ ಪ್ರೀಮಿಯರ್ ಲೀಗ್-2026' ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ ‘ಬ್ಯಾರೀಸ್ ಪ್ರೀಮಿಯರ್ ಲೀಗ್ ಸೀಸನ್ 1 – 2026’ ಕ್ರಿಕೆಟ್ ಪಂದ್ಯಾಟದಲ್ಲಿ ‘ಕ್ರೌನ್ ಹೊನ್ನಾವರ’ ತಂಡವು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು.

ಫೈನಲ್ ಪಂದ್ಯದಲ್ಲಿ ನಫೀಸ್ ಗ್ರೂಪ್ ತಂಡವನ್ನು ಸೋಲಿಸುವ ಮೂಲಕ ಕ್ರೌನ್ ಹೊನ್ನಾವರ ತಂಡವು ‘ಬ್ಯಾರೀಸ್ ಪ್ರೀಮಿಯರ್ ಲೀಗ್ ಸೀಸನ್ 1 – 2026’ ನ್ನು ತನ್ನದಾಗಿಸಿಕೊಂಡಿತು.

ಬಿಜಾಯ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಟೂರ್ನಮೆಂಟ್‌ನಲ್ಲಿ ಹಲವು ಬಲಿಷ್ಠ ತಂಡಗಳು ಕಪ್ ಗಾಗಿ ಸೆಣಸಾಟ ನಡೆಸಿದವು. ಫೈನಲ್ ತಲುಪಿದ ಕ್ರೌನ್ ಹೊನ್ನಾವರ ಹಾಗು ನಫೀಸ್ ಗ್ರೂಪ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ನಡೆಸಿದ್ದು, ಕೊನೆಯಲ್ಲಿ, ಉತ್ತಮ ಪ್ರದರ್ಶನದೊಂದಿಗೆ ಕ್ರೌನ್ ಹೊನ್ನಾವರ ತಂಡ ಜಯಶಾಲಿಯಾಗಿ ಹೊರಹೊಮ್ಮಿತು.

ಇಡೀ ಪಂದ್ಯಾಟದಲ್ಲಿ ಕ್ರೌನ್ ಹೊನ್ನಾವರ ತಂಡದ ಹಮ್ದಾನ್ ಉಡುಪಿ ತನ್ನ ಆಲ್‌ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದರು. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ — ಎಲ್ಲಾ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ ಅವರಿಗೆ ‘ಶ್ರೇಷ್ಠ ಆಟಗಾರ(Most Valuable Player)’ ಪ್ರಶಸ್ತಿಯೊಂದಿಗೆ ಬೈಕನ್ನು ಬಹುಮಾನವಾಗಿ ನೀಡಿ ಅಭಿನಂದಿಸಲಾಯಿತು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

400 ಭಾರತೀಯರನ್ನು ತಾಯ್ನಾಡಿಗೆ ಕಳುಹಿಸಿದ ಬಹರೈನ್ ಕನ್ನಡ ಸಂಘ!

ಬಹರೈನ್: ತಾಯ್ನಾಡಿಗೆ ಮರಳಲು ಬಯಸಿದ ಸುಮಾರು 400 ಭಾರತೀಯರಿಗೆ ಕನ್ನಡ ಸಂಘ...

Related Articles

Popular Categories