ಕುವೈತ್ಡಿಕೆಎಸ್‌ಸಿ ಕುವೈತ್; 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್...

ಡಿಕೆಎಸ್‌ಸಿ ಕುವೈತ್; 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್ ಅಧ್ಯಕ್ಷರಾಗಿ ಪುನರಾಯ್ಕೆ: ಪ್ರ.ಕಾರ್ಯದರ್ಶಿಯಾಗಿ ಲಿಯಾಕತ್, ಕೋಶಾಧಿಕಾರಿಯಾಗಿ ಇಮ್ತಿಯಾಝ್

ಕುವೈತ್: ಡಿಕೆಎಸ್‌ಸಿ ಇದರ ಕುವೈತ್ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಾಲ್ಮಿಯ ಸುನ್ನಿ ಸೆಂಟರ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಯೂಸುಫ್ ಅಬ್ಬಾಸ್ ಬಾರೂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗೌರವಾಧ್ಯಕ್ಷ ಶಫೀಕ್ ಅಹ್ಸನಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಡಿಕೆಎಸ್‌ಸಿ ಕೇಂದ್ರ ಸಮಿತಿ ವೀಕ್ಷಕರಾಗಿ ಆಗಮಿಸಿದ್ದ, ಡಿಕೆಎಸ್‌ಸಿ ವಿಷನ್-30 ಇದರ ಚೇರ್ಮನ್ ಹಾತಿಂ ಹಾಜಿ ಕೂಳೂರು ಉದ್ಘಾಟಿಸಿದರು. ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಬಳಿಕ ಸಭೆಯ ಅಂಗೀಕಾರ ಪಡೆಯಲಾಯಿತು.

ಡಿಕೆಎಸ್‌ಸಿ ಕುವೈತ್ ಇದರ ರಾಯಭಾರಿಯಾಗಿ ಆಗಮಿಸಿದ್ದ ಅಝೀಝ್ ಮೂಳೂರು ನೇತೃತ್ವದಲ್ಲಿ ಸಮಿತಿ ಬರ್ಕಾಸ್ತು ಗೊಳಿಸಿ ಹೊಸ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಸಭೆಯ ಒಮ್ಮತದ ಅಭಿಪ್ರಾಯದಂತೆ 5ನೇ ಬಾರಿಗೆ ಯೂಸುಫ್ ಅಬ್ಬಾಸ್ ಬಾರುದ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಕತ್ ಗಂಗಾವಳಿ ಹಾಗೂ ಕೋಶಾಧಿಕಾರಿಯಾಗಿ ಇಮ್ತಿಯಾಝ್ ಸೂರಿಂಜೆ ಅವರನ್ನು ಆರಿಸಲಾಯಿತು.

15 ಮಂದಿ ಕಾರ್ಯಕಾರಿ ಸಮಿತಿಯನ್ನು ಒಳಗೊಂಡ ನೂತನ ಸಮಿತಿಯನ್ನು ಈ ವೇಳೆ ರಚಿಸಲಾಯಿತು. ಡಿಕೆಎಸ್‌ಸಿ ಸಂಸ್ಥೆಯ ಪರಿಚಯ ಮಾಡುವ ವಿಡಿಯೋವನ್ನು ಪ್ರದರ್ಶನ ಮಾಡಲಾಯಿತು.

ಅತಿಥಿಗಳನ್ನು ಸನ್ಮಾನಿಸಿ, ಕೇಂದ್ರ ಸಮಿತಿಯ ಕಳೆದ ವರ್ಷದ ಪ್ರಮುಖ ಯೋಜನೆಗಳನ್ನು ಸಭೆಗೆ ತಿಳಿಸಲಾಯಿತು. ಕುವೈತ್ ನಲ್ಲಿರುವ ಪ್ರಮುಖ ಸಂಘಟನೆಯ ನೇತಾರರ ಅಭಿನಂದನಾ ಭಾಷಣ ಮುಗಿದ ಬಳಿಕ ಗೌರವಾಧ್ಯಕ್ಷ ಅಬ್ದುರೆಹಮಾನ್ ಸಖಾಫಿ ದುಆ ನೆರವೇರಿಸಿದರು. ಶಫೀಕ್ ಅಹ್ಸನಿ ಸ್ವಾಗತಿಸಿ ಲಿಯಾಕತ್ ಗಂಗಾವಳಿ ವಂದಿಸಿದರು. ಕಾರ್ಯಕ್ರಮವನ್ನು ಹೈದರ್ ಉಚ್ಚಿಲ ನಿರೂಪಿಸಿದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories