ಒಮಾನ್ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟಿಸಿದ ಡಾ.ಬೋರಲಿಂಗಯ್ಯ

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟಿಸಿದ ಡಾ.ಬೋರಲಿಂಗಯ್ಯ

ಮಸ್ಕತ್(ಓಮಾನ್): ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್(ಓಮಾನ್) ಘಟಕವನ್ನು ಶಿವಾನಂದ ಕೋಟ್ಯಾನ್ ಕಟಪಾಡಿ ಅವರ ಅಧ್ಯಕ್ಷತೆಯಲ್ಲಿ ಮಸ್ಕತ್’ನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು.

ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಹಿ.ಚಿ.ಬೋರಲಿಂಗಯ್ಯ ಅವರು ಓಮಾನ್ ದೇಶದ ಗಣ್ಯರು‌, ಕನಾರ್ಟಕ ಗಡಿ ಪ್ರಾಧಿಕಾರದ ಸದಸ್ಯರಾದ ಎ.ಆರ್.ಸುಬ್ಬಯ್ಯ ಕಟ್ಟೆ, ಕಾಸರಗೋಡು ಗಡಿನಾಡು ಪ್ರಾಧಿಕಾರದ ಸದಸ್ಯ ಝೆಡ್.ಎ.ಕೆಯ್ಯರ್ ಸಮ್ಮುಖದಲ್ಲಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಸ್ಕತ್’ನ ಜಾನಪದ ಆಸಕ್ತರು, ಸ್ಥಳೀಯ ಕಲಾವಿದರು, ಗಾಯಕರಿಂದ ಹಲವು ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಓಮಾನ್ ಕನ್ನಡ ಸಂಘದ ಅಧ್ಯಕ್ಷರಾದ ಮಂಜುನಾಥ ಸಂಗಟ್ಟಿ, ಎಸ್.ಕೆ. ಪೂಜಾರಿ, ಶಶಿಧರ ಶೆಟ್ಟಿ ಮಲ್ಲಾರ್ ಮತ್ತು ವಿವಿಧ ಸಂಘ ಮತ್ತು ಕೂಟಗಳ ಪ್ರಮುಖರು ಹಾಗೂ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ.ಬೋರಲಿಂಗಯ್ಯ ಅವರು, ಕರ್ನಾಟಕದ ವೈವಿಧ್ಯಮಯ ಜಾನಪದ ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಎಚ್.ಎಲ್.ನಾಗೇಗೌಡರ ನೇತೃತ್ವದಲ್ಲಿ ಸ್ಥಾಪಿತವಾದ ಯೂನೆಸ್ಕೋ ಮಾನ್ಯತೆ ಪಡೆದಿರುವ ಜಾನಪದ ಲೋಕ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಸ್ಥಳೀಯ ಅನಿವಾಸಿಗಳು ತಮ್ಮ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿದೆ. ನಮ್ಮ ನಾಡು ನುಡಿಯ ಬಗ್ಗೆ ವಾರ್ಷಿಕವಾಗಿ ನಡೆಯುವ ವೈವಿಧ್ಯಮಯ ಕಾರ್ಯಕ್ರಮಗಳಿಂದ ಇಲ್ಲಿ ಘಟಕದ ಅವಶ್ಯಕತೆ ಇದೆ ಎಂದು ಮನಗಂಡು ರಾಜ್ಯದಿಂದ ಅಗಮಿಸಿದ ಅತಿಥಿಗಳ ಸೂಚನೆ ಮತ್ತು ಮಾರ್ಗದರ್ಶನದಲ್ಲಿ ಫಟಕ ಸ್ಥಾಪಿಸಲಾಯಿತು ಎಂದು ನೂತನ ಘಟಕದ ಅಧ್ಯಕ್ಷರಾದ ಶಿವಾನಂದ ಕೋಟ್ಯಾನ್ ವಿವರಿಸಿದರು.

ಮಸ್ಕತ್’ನ ಸಾಮಾಜಿಕ ಕಾರ್ಯಕರ್ತ ಗಣೇಶ್ ಶೆಟ್ಟಿ ಮತ್ತು ಸತೀಶ್ ಪೂಜಾರಿ ಬರ್ಕ ಹಾಗೂ ಸ್ಕೂಲ್ ಲೀಡರ್ ಚಲನಚಿತ್ರದ ನಿರ್ಮಾಪಕರಾದ ಕಟಪಾಡಿ ಸತ್ಯೇಂದ್ರ ಪೈ, ನಿರ್ದೇಶಕ ರಝಾಕ್ ಪೂತ್ತೂರು, ಪತ್ರಕರ್ತ ಪ್ರಕಾಶ್ ಸುವರ್ಣ, ಮೂರು ಮುತ್ತು ಕಲಾವಿದ ನಾಗೇಶ್ ಕಾಮತ್, ಛಾಯಾಗ್ರಾಹಕ ಮೋಹನ್ ಪಡ್ರೆ, ಯುವ ಜಾದುಗಾರ ಪ್ರಥಮ್ ಕಾಮತ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಮಾಸ್ಟರ್ ಅಯುಷ್ ಮರಾಠೆ ಹಾಡು ಮತ್ತು ಮಾಸ್ಟರ್ ಹರ್ಪಿಲ್ ಅಂಚನ್ ಅವರ ಜಾನಪದ ಕಥೆಯು ಮನಮೋಹಕವಾಗಿ ಮೂಡಿ ಬಂತು. ಕಾರ್ಯಕ್ರಮದಲ್ಲಿ ಫಟಕದ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ ವಂದಿಸಿದರು. ಗೌರವ ಸಲಹೆಗಾರದ ಯುವರಾಜ್ ಸಾಲ್ಯಾನ್, ಸುರೇಂದ್ರ ಅಮಿನ್, ಜೂಯಿಸನ್, ಅನಿಲ್ ಪೂತ್ತೂರು, ಬಾಲಕೃಷ್ಣ ಕೋಟ್ಯಾನ್ ಕಾಪು, ದಿನಕರ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಅಕ್ಷಯ ಮೂಡಬಿದ್ರೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Konkani movie ‘My Dear Father’ thrills audience in Kuwait with double premiere shows

Kuwait: The Konkani film My Dear Father was screened...

Related Articles

Popular Categories