ಯುಎಇತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ.ಸಂತೋಷ್...

ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ.ಸಂತೋಷ್ ಗುರೂಜಿ

ದುಬೈ: ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬೈಯಲ್ಲಿ ಯುಎಇ ಬಂಟ್ಸ್ ಮತ್ತು ಯುಎಇಯಲ್ಲಿರುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ಇತ್ತೀಚೆಗೆ ತುಳುನಾಡ ಸಂಸ್ಕೃತಿಯ ಅನಾವರಣ ಉಪನ್ಯಾಸ ಕಾರ್ಯಕ್ರಮ ಫಾರ್ಚೂನ್ ಪ್ಲಾಝಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಶ್ರೀ ಬಾರ್ಕೂರು ಮಹಾ ಸಂಸ್ಥಾನ (ಭಾರ್ಗವಬೀಡು ಬಾರ್ಕೂರು) ಪೀಠಾಧಿಪತಿ ಶ್ರೀ ಡಾ.ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಪ್ರವಚನ ಹಾಗೂ ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಸುಮಂಗಲೆಯರ ಪೂರ್ಣ ಕುಂಭ ಹಾಗೂ ಚೆಂಡೆ ವಾದನದೊಂದಿಗೆ ಪರಮ ಪೂಜ್ಯ ಸ್ವಾಮಿಜಿಯವರನ್ನು ಬರಮಾಡಿಕೊಂಡು ಜ್ಯೋತಿ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಬುಧಾಭಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಸ್ವಾಗತ ಮತ್ತು ಪರಿಚಯ, ಯುಎಇ ಬಂಟ್ಸ್ ನ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿಯವರಿಂದ ಪ್ರಾಸ್ಥವಿಕ ಭಾಷಣದಲ್ಲಿ ಬಾರ್ಕೂರು ಮಹಾ ಸಂಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಶ್ರೀ ಡಾ.ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರಿಗೆ ಯುಎಇಯಲ್ಲಿ ಕಾರ್ಯೋನ್ಮುಖವಾಗಿರುವ ಸರ್ವ ಸಂಘಟನೆಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಪ್ರಕ್ರಿಯೆಯಲ್ಲಿ ಸರ್ವೋತ್ತಮ ಶೆಟಿ, ಪ್ರವೀಣ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ ಕೊಟ್ಟಿಂಜ ಮತ್ತು ಬಿ.ಕೆ. ಗಣೇಶ್ ರೈಯವರು ಪಾಲ್ಗೊಂಡಿದ್ದರು.

ತುಳುನಾಡಿನ ಸಮಗ್ರ ಇತಿಹಾಸ ಮತ್ತು ಧಾರ್ಮಿಕ ಆಚರಣೆಗಳು, ದೈವಾರಾಧನೆ, ಭೂತಾರಾಧನೆ, ಅತ್ಯಂತ ಕ್ರಮಬದ್ಧವಾಗಿ ನಡೆಯುತಿದ್ದ ಸಾಂಪ್ರದಾಯಿಕ ವಿವಾಹಗಳು ಇಂದು ಹಾದಿ ತಪ್ಪಿ, ತುಳುನಾಡಿಗೆ ಸಂಬಂಧವಿಲ್ಲದೆ ಇರುವ ಆಚರಣೆಗೆ ಜೋತು ಬಿದ್ದು ಮೌಢ್ಯತೆಯಲ್ಲಿ ನಡೆಯುತ್ತಿರುವ ಆಚರಣೆಗೆ ಸ್ವಾಮೀಜಿಯವರು ಕಳವಳ ವ್ಯಕ್ತಪಡಿಸಿದರು.

ಸಭೆಯಲ್ಲಿ ಡಾ.ಬಿ.ಆರ್. ಶೆಟ್ಟಿಯವರು, ಡಾ.ಸಂತೋಷ್ ಗುರೂಜಿಯವರ ಸನಾತನ ಸಂಸ್ಕೃತಿಯನ್ನು ವಿಶ್ವದಾದ್ಯಂತ ಪಸರಿಸುವ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭವನ್ನು ಹಾರೈಸಿದರು. ರಾಜೇಶ ಕುತ್ತಾರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ಸರ್ವರಿಗೂ ವಂದನೆಯನ್ನು ಸಲ್ಲಿಸಿದರು. ಕೊನೆಯಲ್ಲಿ ಸರ್ವರಿಗೂ ಉಪಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Hot this week

ಹಾಂಗ್ ಕಾಂಗ್‌ನಲ್ಲಿ ಕನ್ನಡ ಶಾಲೆ ಆರಂಭಿಸಲು ಕರ್ನಾಟಕ ಸರಕಾರ ನೆರವು ಅಗತ್ಯ: ‘ಕನ್ನಡ ಸಂಘ ಹಾಂಗ್ ಕಾಂಗ್’ ಅಧ್ಯಕ್ಷೆ ವಾಣಿ ರಮೇಶ್ ಬಾಬು

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಜಗತ್ತಿನ ಅತೀ ಹೆಚ್ಚು ಶ್ರೀಮಂತರನ್ನು ಹೊಂದಿರುವ...

ದುಬೈ; ಫೆಬ್ರವರಿ 28ರಂದು ‘ಬ್ಯಾರೀಸ್ ಕಲ್ಚರಲ್ ಫೋರಮ್( BCF)’ನಿಂದ ‘ಇಫ್ತಾರ್ ಮೀಟ್ 2026’

ದುಬೈ: ಕಳೆದ 28 ವರ್ಷಗಳಿಂದ ಸಾಮುದಾಯಿಕ ಸೇವಾ ಕಾರ್ಯದಲ್ಲಿ ತೊಡಗಿ ಕೊಂಡಿರುವ...

ಶಾರ್ಜಾ ರೋಲ್ಲಾದಲ್ಲಿ ‘ಮ್ಯಾಕ್ಸ್‌ಕೇರ್ ಕ್ಲಿನಿಕ್ಸ್’ನ ಹೊಸ ಶಾಖೆ ಆರಂಭ; ಕಡಿಮೆ ವೆಚ್ಚದ ಆರೋಗ್ಯ ಸೇವೆಗೆ ಹೆಚ್ಚಿನ ಪ್ರವೇಶ

ಶಾರ್ಜಾ: ಯುಎಇಯಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಾಥಮಿಕ ಆರೋಗ್ಯ ಸೇವಾ ಸಂಸ್ಥೆಗಳಲ್ಲೊಂದಾದ ಮ್ಯಾಕ್ಸ್‌ಕೇರ್...

ಯುಎಇ ಕುಲಾಲ ಫ್ಯಾಮಿಲಿಯಿಂದ ಶ್ರೀಸತ್ಯನಾರಾಯಣ ಪೂಜೆ

ದುಬೈ: ಇಲ್ಲಿನ ಗ್ಲೆಂಡೆಲ್ ಅಂತಾರಾಷ್ಟ್ರೀಯ ಶಾಲಾ ಸಭಾಂಗಣದಲ್ಲಿ ರವಿವಾರ ಸುಬ್ರಹ್ಮಣ್ಯ ಭಟ್...

ಮಸ್ಕತ್ ನಲ್ಲಿ ತುಳು ಚಿತ್ರರಸಿಕರ ಮನಗೆದ್ದ ‘ಬೆಲ್ಲದ ಗಟ್ಟಿ’ ತುಳು ಸಿನೆಮಾ!

ಒಮಾನ್: ಕೌಟುಂಬಿಕ, ಸಾಮಾಜಿಕ, ಕುತೂಹಲ ಮೂಡಿಸುವ ಥ್ರಿಲ್ಲರ್ ಅಂಶಗಳನ್ನೊಳಗೊಂಡ ತುಳು ಚಲನಚಿತ್ರ...

Related Articles

Popular Categories