ಯುಎಇದುಬೈ: 'ಬ್ಯಾರೀಸ್ ಕಲ್ಚರಲ್ ಫೋರಮ್'ನಿಂದ ಮಾರ್ಚ್ 8ರಂದು 'BCF...

ದುಬೈ: ‘ಬ್ಯಾರೀಸ್ ಕಲ್ಚರಲ್ ಫೋರಮ್’ನಿಂದ ಮಾರ್ಚ್ 8ರಂದು ‘BCF ಇಫ್ತಾರ್ ಮೀಟ್-2025’

ದುಬೈ: ಕಳೆದ ಸುಮಾರು 25 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಮಾಡುತ್ತಿರುವ ಅನಿವಾಸಿ ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯ ಸಮಾಜ ಸೇವಾ ಸಂಸ್ಥೆ ‘ಬ್ಯಾರೀಸ್ ಕಲ್ಚರಲ್ ಫೋರಮ್’ (ಬಿಸಿಎಫ್) ವತಿಯಿಂದ ಪ್ರತೀ ವರ್ಷ ನಡೆಯುವಂತೆ ಈ ವರ್ಷವೂ ‘BCF ಇಫ್ತಾರ್ ಮೀಟ್-2025’ ಇಫ್ತಾರ್ ಕೂಟವು ಮುಂದಿನ ತಿಂಗಳ ಮಾರ್ಚ್ 8ರ ಶನಿವಾರ ( 08 / 03 / 2025 ) ದುಬೈ ದೇರಾದ ಅಬು ಹೈಲ್ ನ ಅಲ್ ಜಾಹಿಯ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ ಎಂದು ಬ್ಯಾರೀಸ್ ಕಲ್ಚರಲ್ ಫೋರಮ್ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

UAEಯ ಎಲ್ಲ ಕಡೆಯಿಂದ, ಇತರ ಕೊಲ್ಲಿ ನಾಡುಗಳಿಂದ ಮತ್ತು ಕರ್ನಾಟಕದಿಂದ ನೂರಾರು ಸಂಖ್ಯೆಯಲ್ಲಿ ಕನ್ನಡಿಗರು, ಕನ್ನಡೇತರರು ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಈ ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ದೊಡ್ಡ ಸಂಖ್ಯೆಯಲ್ಲಿ ವಿಶೇಷ ಆಹ್ವಾನಿತರು, ಉಲೇಮಾ ಸದಾತುಗಳು, ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ನೇತಾರರು, ಉದ್ಯಮಿಗಳು ಮತ್ತು ಹಲವಾರು ಕನ್ನಡ ಪರ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಕ್ಕಳಿಗೆ ಇಸ್ಲಾಮಿಕ್ ರಸ ಪ್ರಶ್ನೆಗಳು, ಕುರಾನ್ ಪಾರಾಯಣ ಮೊದಲಾದ ಸ್ಪರ್ಧೆಗಳೊಂದಿಗೆ ಪ್ರಖ್ಯಾತ ಧಾರ್ಮಿಕ ನಾಯಕರುಗಳ ಧಾರ್ಮಿಕ-ನೈತಿಕ ಪ್ರಭಾಷಣ ನಡೆಯಲಿದೆ. ಅಂದು ವಿಶೇಷ ವಾಗಿ BCFನ ಇನ್ನೊಂದು ವಿಶೇಷ ಸೇವಾ ಕಾರ್ಯವಾದ BCF ಸ್ಕಾಲರ್ ಶಿಪ್ ಬಗ್ಗೆ ಪ್ರಸ್ತಾವನೆ ನೀಡಲಾಗುವುದು. ಸಾಮುದಾಯಿಕ ರಂಗದಲ್ಲಿ ವಿಶೇಷ ಸೇವೆ ಗೈದ ವ್ಯಕ್ತಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.

BCF ಅಧ್ಯಕ್ಷರಾದ ಡಾ.ಬಿ.ಕೆ.ಯೂಸುಫ್ ಮತ್ತು ಇತರ ನಾಯಕರ ಮುಂದಾಳುತನದಲ್ಲಿ ನಡೆಯುವ ಈ ಇಫ್ತಾರ್ ಕಾರ್ಯಕ್ರಮದಲ್ಲಿ UAE ಯಲ್ಲಿರುವ ಎಲ್ಲ ಕನ್ನಡಿಗರು ತಮ್ಮ ಕುಟುಂಬ ಸ್ನೇಹಿತರ ಸಮೇತ ಭಾಗವಹಿಸಬೇಕಾಗಿ BCF Ifthar Committee Chairman ಅಬ್ದುಲ್ ಲತೀಫ್ ಮುಲ್ಕಿ, Vice Chairman ಅಫೀಕ್ ಹುಸೈನ್ ಮತ್ತು ಅವರ ಸಹವರ್ತಿಗಳು ಬಿಸಿಎಫ್ ಪರವಾಗಿ ಆಹ್ವಾನಿಸಿದ್ದಾರೆ.

Hot this week

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Yakshagana staged in German for first time in Munich, children from Europe perform

Munich: In a significant moment for coastal Karnataka’s traditional...

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

Related Articles

Popular Categories