ಯುಎಇದುಬೈ; ಅ.25 ರಂದು ದುಬೈ ಗಡಿನಾಡ ಉತ್ಸವ: ಆಮಂತ್ರಣ...

ದುಬೈ; ಅ.25 ರಂದು ದುಬೈ ಗಡಿನಾಡ ಉತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ನಗರದ ಔದ್ ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಯುವ ಉದ್ಯಮಿ ಪ್ರಕಾಶ್ ಕುಂಪಲ ಬಿಡುಗಡೆಗೊಳಿಸಿದರು.

ಬಿಸಿಸಿಐ ಅಧ್ಯಕ್ಷರಾದ ಹಿದಾಯತ್ ಅಡ್ಡೂರು, ಉಪಾಧ್ಯಕ್ಷರಾದ ಬಶೀರ್ ಕಿನ್ನಿಂಗಾರ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಗಲ್ಫ್ ದೇಶಗಳ ಮುಖ್ಯ ಸಂಚಾಲಕರಾದ ಅಶ್ರಫ್ ಶಾ ಮಂತೂರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಮೊಹಮ್ಮದ್ ಅಲಿ ಉಚ್ಚಿಲ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೇಂದ್ರ ಘಟಕದ ಕೋಶಾಧಿಕಾರಿ ಝಡ್ ಎ ಕಯ್ಯಾರ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ದುಬೈ ಘಟಕದ ಅಧ್ಯಕ್ಷರಾದ ಅಮರ್ ದೀಪ ಕಲ್ಲುರಾಯ, ಮಾಧ್ಯಮ ಸಂಯೋಜಕ ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮತ್ತು ಬಿಸಿಸಿಐನ ಪದಾಧಿಕಾರಿಗಳಾದ ಅನ್ವರ್ ಹುಸೈನ್ ಅಡ್ಡೂರು, ಮುಶ್ತಾಕ್ ಕದ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories