ಯುಎಇದುಬೈ; 'ಮಾರ್ಗದೀಪ ಪ್ರೀಮಿಯರ್ ಲೀಗ್' ಕ್ರಿಕೆಟ್ ಪಂದ್ಯಾಟ: 'ಬೇಕಲ್...

ದುಬೈ; ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ: ‘ಬೇಕಲ್ ಫೋರ್ಟ್ ರೈಡರ್ಸ್’ಗೆ ಚಾಂಪಿಯನ್ಸ್ ಪಟ್ಟ; ‘ಕೋಟೆ ಹೀರೋಸ್’ ರನ್ನರ್ ಅಪ್

ದುಬೈ: ಮಾರ್ಗ ದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ ಬೇಕಲ್ ಅವರ ಸವಿನೆನಪಿಕಾಗಿ ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ಶಾರ್ಜಾದ NASS ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಿಂದ ಜರುಗಿತು.

ಪಂದ್ಯಾಟದಲ್ಲಿ ಮಂಜುನಾಥ ಕಾಸರಗೋಡು ಹಾಗೂ ದಾಮೋದರ ರಾವ್ ಅವರ ಮಾಲಕತ್ವದ ‘ಗಡಿನಾಡು ಸ್ಟ್ರೈಕರ್’, ರಘುನಾಥ್ ಎಂ ಹಾಗೂ ಬಿಪಿನ್ ಚಂದ್ರ ನಾಯಕ್ ಮಾಲಕತ್ವದ ‘ಬೇಕಲ್ ಫೋರ್ಟ್ ರೈಡರ್ಸ್’, ಶ್ರೀಪತಿ ಕೆ ಹಾಗೂ ಕಮಲಾಕ್ಷ ಕೆ ಮಾಲಕತ್ವದ ‘ಕ್ಷತ್ರಿಯ ಲೆಜೆಂಡ್ಸ್’ ಹಾಗೂ ನರೇಶ್ ಸಿ ಹೆಚ್ ಹಾಗೂ ಧನಂಜಯ ಸಿ ಹೆಚ್ ಮಾಲಕತ್ವದ ‘ಕೋಟೆ ಹೀರೋಸ್’ ನಾಲ್ಕು ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಮುಖ್ಯ ಸಂಘಟಕರರಾಗಿ ಸುಧೀರ್ ಎಸ್ ಹಾಗೂ ಸುಬ್ರಹ್ಮಣ್ಯ ಬಿ.ಕೆ.ಯವರು ಕಾರ್ಯ ನಿರ್ವಹಿಸಿದರು.

ಸಂಘದ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಕಾರ್ಯದರ್ಶಿ ಸುನಿಲ್ ರಾವ್ ಹೇರೂರು, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು,ಕೋಶಾಧಿಕಾರಿಯಾದ ರಾಜೇಶ್ ರಾವ್, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್ ಹಾಗೂ ಕ್ರೀಡಾ ಕಾಯದರ್ಶಿ ಸುಬ್ರಹ್ಮಣ್ಯ ಬಿ. ಕೆ.ರವರು ಉಪಸ್ಥಿತರಿದ್ದರು.

ಪಂದ್ಯಾಟದ ಚಾಂಪಿಯನ್ಸ್ ತಂಡವಾಗಿ ‘ಬೇಕಲ್ ಫೋರ್ಟ್ ರೈಡರ್ಸ್’ ಹಾಗೂ ರನ್ನರ್ಸ್ ಅಪ್ ಆಗಿ ‘ಕೋಟೆ ಹೀರೋಸ್’ ತಂಡ ಹೊರಹೊಮ್ಮಿತು. ಸುಗಂಧರಾಜ ಬೇಕಲ್ ರವರು ಸ್ವಾಗತಿಸಿದರು. ಅಜಿತ್ ಕೊರಕೋಡು ಹಾಗೂ ಸತೀಶ್ ಹಂಗಳೂರು ಮುಖ್ಯ ಸಲಹೆಗಾರರಾಗಿದ್ಹರು. ಹರಿಪ್ರಸಾದ್ ಕೋಟೆ ಕಾರ್ಯಕ್ರಮ ನಿರೂಪಿಸಿದರು.

Hot this week

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Yakshagana staged in German for first time in Munich, children from Europe perform

Munich: In a significant moment for coastal Karnataka’s traditional...

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

Related Articles

Popular Categories