ಯುಎಇದುಬೈ; 'ಮಾರ್ಗದೀಪ ಪ್ರೀಮಿಯರ್ ಲೀಗ್' ಕ್ರಿಕೆಟ್ ಪಂದ್ಯಾಟ: 'ಬೇಕಲ್...

ದುಬೈ; ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ: ‘ಬೇಕಲ್ ಫೋರ್ಟ್ ರೈಡರ್ಸ್’ಗೆ ಚಾಂಪಿಯನ್ಸ್ ಪಟ್ಟ; ‘ಕೋಟೆ ಹೀರೋಸ್’ ರನ್ನರ್ ಅಪ್

ದುಬೈ: ಮಾರ್ಗ ದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ ಬೇಕಲ್ ಅವರ ಸವಿನೆನಪಿಕಾಗಿ ‘ಮಾರ್ಗದೀಪ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟ ಇತ್ತೀಚೆಗೆ ಶಾರ್ಜಾದ NASS ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಿಂದ ಜರುಗಿತು.

ಪಂದ್ಯಾಟದಲ್ಲಿ ಮಂಜುನಾಥ ಕಾಸರಗೋಡು ಹಾಗೂ ದಾಮೋದರ ರಾವ್ ಅವರ ಮಾಲಕತ್ವದ ‘ಗಡಿನಾಡು ಸ್ಟ್ರೈಕರ್’, ರಘುನಾಥ್ ಎಂ ಹಾಗೂ ಬಿಪಿನ್ ಚಂದ್ರ ನಾಯಕ್ ಮಾಲಕತ್ವದ ‘ಬೇಕಲ್ ಫೋರ್ಟ್ ರೈಡರ್ಸ್’, ಶ್ರೀಪತಿ ಕೆ ಹಾಗೂ ಕಮಲಾಕ್ಷ ಕೆ ಮಾಲಕತ್ವದ ‘ಕ್ಷತ್ರಿಯ ಲೆಜೆಂಡ್ಸ್’ ಹಾಗೂ ನರೇಶ್ ಸಿ ಹೆಚ್ ಹಾಗೂ ಧನಂಜಯ ಸಿ ಹೆಚ್ ಮಾಲಕತ್ವದ ‘ಕೋಟೆ ಹೀರೋಸ್’ ನಾಲ್ಕು ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಮುಖ್ಯ ಸಂಘಟಕರರಾಗಿ ಸುಧೀರ್ ಎಸ್ ಹಾಗೂ ಸುಬ್ರಹ್ಮಣ್ಯ ಬಿ.ಕೆ.ಯವರು ಕಾರ್ಯ ನಿರ್ವಹಿಸಿದರು.

ಸಂಘದ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಕಾರ್ಯದರ್ಶಿ ಸುನಿಲ್ ರಾವ್ ಹೇರೂರು, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು,ಕೋಶಾಧಿಕಾರಿಯಾದ ರಾಜೇಶ್ ರಾವ್, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್ ಹಾಗೂ ಕ್ರೀಡಾ ಕಾಯದರ್ಶಿ ಸುಬ್ರಹ್ಮಣ್ಯ ಬಿ. ಕೆ.ರವರು ಉಪಸ್ಥಿತರಿದ್ದರು.

ಪಂದ್ಯಾಟದ ಚಾಂಪಿಯನ್ಸ್ ತಂಡವಾಗಿ ‘ಬೇಕಲ್ ಫೋರ್ಟ್ ರೈಡರ್ಸ್’ ಹಾಗೂ ರನ್ನರ್ಸ್ ಅಪ್ ಆಗಿ ‘ಕೋಟೆ ಹೀರೋಸ್’ ತಂಡ ಹೊರಹೊಮ್ಮಿತು. ಸುಗಂಧರಾಜ ಬೇಕಲ್ ರವರು ಸ್ವಾಗತಿಸಿದರು. ಅಜಿತ್ ಕೊರಕೋಡು ಹಾಗೂ ಸತೀಶ್ ಹಂಗಳೂರು ಮುಖ್ಯ ಸಲಹೆಗಾರರಾಗಿದ್ಹರು. ಹರಿಪ್ರಸಾದ್ ಕೋಟೆ ಕಾರ್ಯಕ್ರಮ ನಿರೂಪಿಸಿದರು.

Hot this week

ಯುರೋಪಿನಾದ್ಯಂತ ಭಾರತೀಯ ಕಲಾಪ್ರಕಾರಗಳಿಗೆ ಆಸರೆಯಾಗಿರುವ ‘ಬೆಲ್ಜಿಯಂ ಕಲಾ ವೇದಿಕೆ’

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ದೂರದ ಯುರೋಪಿನ ನೆಲದಲ್ಲಿ ಭಾರತೀಯ ಕಲಾಪ್ರಕಾರಗಳನ್ನು,...

55th International Cultural Fest and Cultural Exchange Programme concludes in Dubai

Dubai, July 26: The 55th International Cultural Fest and...

ಖತರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಖತರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ...

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

Related Articles

Popular Categories