ಯುಎಇದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಕೇರಳ ರಾಜ್ಯದ ನಾಡ ಹಬ್ಬ ಓಣಂವನ್ನು ಅಗಸ್ಟ್ 26ರಂದು ನಗರದ ಅಲ್ ಕಿಸೆಸ್ಸ್ ನ ಫಾರ್ಚೂನ್ ಗ್ರಾಂಡ್ ಹೋಟೆಲ್ ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ನಿರೂಪಕ ಚಿತ್ರನಟ ಆರ್.ಜೆ.ಮಿಥುನುರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲಾರು ಒಟ್ಟುಗೂಡಿ ನಾಡಹಬ್ಬ ಓಣಂ ಆಚರಿಸಿದಾಗ ಶಾಂತಿ ಮತ್ತು ಸಹೋದರತೆಯ ಸಂತೋಷದ ವಾತಾವರಣ ಪಸರಿಸುತ್ತದೆ ಎಂದು ಹೇಳಿ ಎಲ್ಲಾರಿಗೂ ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ, ಕೇರಳದ ಸಂಸ್ಕೃತಿ, ಪರಂಪರೆ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪ್ರಮುಖ ಹಬ್ಬವೇ ಓಣಂ. ನಮ್ಮ ಸಂಸ್ಥೆಯ ಸಿಬ್ಬಂದಿಗಳು ಮತ್ತು ಗ್ರಾಹಕರೊಂದಿಗೆ ಒಟ್ಟುಗೂಡಿ ಓಣಂ ಹಬ್ಬವನ್ನು ಆಚರಿಸಲು ಸಂತೋಷವಾಗುತ್ತದೆ ಎಂದು ಹೇಳಿ, ಎಲ್ಲಾರಿಗೂ ಓಣಂ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ದುಬೈ ಮುನ್ಸಿಪಾಲಿಟಿ ಉದ್ಯೋಗಿ ಮಿಸ್ಟರ್ ಬೋಬಿ ಮತ್ತು ಪ್ರವೀಣ್ ಕುಮಾರ್ ಶೆಟ್ಟಿಯವರ ಪುತ್ರಿ ಪ್ರಾಂಚಿ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಪೂಕಳಂ(ಹೂವಿನ ರಂಗೋಲಿ) ಹಾಕಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರನ್ನು ಮಾವೆಲ್ಲಿ(ಬಲಿ ಚಕ್ರವರ್ತಿ) ಮತ್ತು ಕೇರಳದ ಚೆಂಡೆ ವಾದನದಲ್ಲಿ ಸ್ವಾಗತಿಸಲಾಯಿತು. ನಂತರ ಓಣಂ ಭೋಜನ ಸವಿಯಲಾಯಿತು.

ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

Related Articles

Popular Categories