ಯುಎಇದುಬೈ; ಅ.11ರಂದು 'ಗಮ್ಮತ್ ಕಲಾವಿದೆರ್ ದುಬೈ' ತಂಡದಿಂದ 'ಪೋನಗ...

ದುಬೈ; ಅ.11ರಂದು ‘ಗಮ್ಮತ್ ಕಲಾವಿದೆರ್ ದುಬೈ’ ತಂಡದಿಂದ ‘ಪೋನಗ ಕೊನೊಪರಾ..?’ ನಾಟಕ

ದುಬೈ: ಯುಎಇಯಲ್ಲಿರುವ ನಾಟಕ ಅಭಿಮಾನಿಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನರಂಜನೆ ನೀಡುತ್ತಾ ಬಂದಿರುವ ‘ಗಮ್ಮತ್ ಕಲಾವಿದೆರ್ ದುಬೈ’ ಯುಎಇ ತಂಡವು ಅಕ್ಟೋಬರ್ 11ರಂದು ಮತ್ತೊಮ್ಮೆ ಮನರಂಜನೆ ನೀಡಲು ತಯಾರಾಗಿ ನಿಂತಿದೆ.

ಅಕ್ಟೋಬರ್ 11ರಂದು ಸಂಜೆ 5 ಗಂಟೆಗೆ ನಗರದ ಎಮಿರೇಟ್ಸ್ ಥೀಯೇಟರ್ ಉಮ್ ಅಲ್ ಸೈಫ್ ನ ಸಭಾಂಗಣದಲ್ಲಿ “ಪೋನಗ ಕೊನೊಪರಾ..?” ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿಯವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಖ್ಯಾತ ರಂಗ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ರಚನೆಯ “ಪೋನಗ ಕೊನೊಪರಾ” ಈ ನಾಟಕವು ವಿಶೇಷ ಶೈಲಿಯಲ್ಲಿ ಮೂಡಿಬಂದಿದೆ. ಈ ನಾಟಕವು ಯುಎಇಯ ನಾಟಕ ಅಭಿಮಾನಿಗಳಿಗೆ ಇಷ್ಟವಾಗಬಹುದು. ಯುಎಇಯಲ್ಲಿ ಇರುವ ತುಳುವರು ಈ ನಾಟಕವನ್ನು ನೋಡಲೇಬೇಕು ಎಂದು ವಿನಂತಿಸಿದ್ದರಲ್ಲದೆ, ಕಾರ್ಯಕ್ರಮಕ್ಕೆ ಊರಿಂದ ಮುಖ್ಯ ಅತಿಥಿಯಾಗಿ ಖ್ಯಾತ ಜ್ಯೋತಿಷ್ಯರು, ಮುಂಬಯಿ ಸೈನ್ ಕನ್ನಡ‌ ಸಂಘದ ಅಧ್ಯಕ್ಷರಾದ ಡಾ.ಎಂ.ಜೆ.ಪ್ರವೀಣ್ ಭಟ್, ಖ್ಯಾತ ಮುಳುಗು ತಜ್ಞ, ಸಮಾಜ ಸೇವಕರಾದ ಈಶ್ವರ್ ಮಲ್ಪೆ, ಪತ್ರಕರ್ತ ವಾಲ್ಟರ್ ನಂದಳಿಕೆಯವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories