ಯುಎಇದುಬೈ; ಅ.11ರಂದು 'ಗಮ್ಮತ್ ಕಲಾವಿದೆರ್ ದುಬೈ' ತಂಡದಿಂದ 'ಪೋನಗ...

ದುಬೈ; ಅ.11ರಂದು ‘ಗಮ್ಮತ್ ಕಲಾವಿದೆರ್ ದುಬೈ’ ತಂಡದಿಂದ ‘ಪೋನಗ ಕೊನೊಪರಾ..?’ ನಾಟಕ

ದುಬೈ: ಯುಎಇಯಲ್ಲಿರುವ ನಾಟಕ ಅಭಿಮಾನಿಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನರಂಜನೆ ನೀಡುತ್ತಾ ಬಂದಿರುವ ‘ಗಮ್ಮತ್ ಕಲಾವಿದೆರ್ ದುಬೈ’ ಯುಎಇ ತಂಡವು ಅಕ್ಟೋಬರ್ 11ರಂದು ಮತ್ತೊಮ್ಮೆ ಮನರಂಜನೆ ನೀಡಲು ತಯಾರಾಗಿ ನಿಂತಿದೆ.

ಅಕ್ಟೋಬರ್ 11ರಂದು ಸಂಜೆ 5 ಗಂಟೆಗೆ ನಗರದ ಎಮಿರೇಟ್ಸ್ ಥೀಯೇಟರ್ ಉಮ್ ಅಲ್ ಸೈಫ್ ನ ಸಭಾಂಗಣದಲ್ಲಿ “ಪೋನಗ ಕೊನೊಪರಾ..?” ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿಯವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಖ್ಯಾತ ರಂಗ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ರಚನೆಯ “ಪೋನಗ ಕೊನೊಪರಾ” ಈ ನಾಟಕವು ವಿಶೇಷ ಶೈಲಿಯಲ್ಲಿ ಮೂಡಿಬಂದಿದೆ. ಈ ನಾಟಕವು ಯುಎಇಯ ನಾಟಕ ಅಭಿಮಾನಿಗಳಿಗೆ ಇಷ್ಟವಾಗಬಹುದು. ಯುಎಇಯಲ್ಲಿ ಇರುವ ತುಳುವರು ಈ ನಾಟಕವನ್ನು ನೋಡಲೇಬೇಕು ಎಂದು ವಿನಂತಿಸಿದ್ದರಲ್ಲದೆ, ಕಾರ್ಯಕ್ರಮಕ್ಕೆ ಊರಿಂದ ಮುಖ್ಯ ಅತಿಥಿಯಾಗಿ ಖ್ಯಾತ ಜ್ಯೋತಿಷ್ಯರು, ಮುಂಬಯಿ ಸೈನ್ ಕನ್ನಡ‌ ಸಂಘದ ಅಧ್ಯಕ್ಷರಾದ ಡಾ.ಎಂ.ಜೆ.ಪ್ರವೀಣ್ ಭಟ್, ಖ್ಯಾತ ಮುಳುಗು ತಜ್ಞ, ಸಮಾಜ ಸೇವಕರಾದ ಈಶ್ವರ್ ಮಲ್ಪೆ, ಪತ್ರಕರ್ತ ವಾಲ್ಟರ್ ನಂದಳಿಕೆಯವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories