ಯುಎಇದುಬೈ; ಅ.11ರಂದು 'ಗಮ್ಮತ್ ಕಲಾವಿದೆರ್ ದುಬೈ' ತಂಡದಿಂದ 'ಪೋನಗ...

ದುಬೈ; ಅ.11ರಂದು ‘ಗಮ್ಮತ್ ಕಲಾವಿದೆರ್ ದುಬೈ’ ತಂಡದಿಂದ ‘ಪೋನಗ ಕೊನೊಪರಾ..?’ ನಾಟಕ

ದುಬೈ: ಯುಎಇಯಲ್ಲಿರುವ ನಾಟಕ ಅಭಿಮಾನಿಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನರಂಜನೆ ನೀಡುತ್ತಾ ಬಂದಿರುವ ‘ಗಮ್ಮತ್ ಕಲಾವಿದೆರ್ ದುಬೈ’ ಯುಎಇ ತಂಡವು ಅಕ್ಟೋಬರ್ 11ರಂದು ಮತ್ತೊಮ್ಮೆ ಮನರಂಜನೆ ನೀಡಲು ತಯಾರಾಗಿ ನಿಂತಿದೆ.

ಅಕ್ಟೋಬರ್ 11ರಂದು ಸಂಜೆ 5 ಗಂಟೆಗೆ ನಗರದ ಎಮಿರೇಟ್ಸ್ ಥೀಯೇಟರ್ ಉಮ್ ಅಲ್ ಸೈಫ್ ನ ಸಭಾಂಗಣದಲ್ಲಿ “ಪೋನಗ ಕೊನೊಪರಾ..?” ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿಯವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಖ್ಯಾತ ರಂಗ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ರಚನೆಯ “ಪೋನಗ ಕೊನೊಪರಾ” ಈ ನಾಟಕವು ವಿಶೇಷ ಶೈಲಿಯಲ್ಲಿ ಮೂಡಿಬಂದಿದೆ. ಈ ನಾಟಕವು ಯುಎಇಯ ನಾಟಕ ಅಭಿಮಾನಿಗಳಿಗೆ ಇಷ್ಟವಾಗಬಹುದು. ಯುಎಇಯಲ್ಲಿ ಇರುವ ತುಳುವರು ಈ ನಾಟಕವನ್ನು ನೋಡಲೇಬೇಕು ಎಂದು ವಿನಂತಿಸಿದ್ದರಲ್ಲದೆ, ಕಾರ್ಯಕ್ರಮಕ್ಕೆ ಊರಿಂದ ಮುಖ್ಯ ಅತಿಥಿಯಾಗಿ ಖ್ಯಾತ ಜ್ಯೋತಿಷ್ಯರು, ಮುಂಬಯಿ ಸೈನ್ ಕನ್ನಡ‌ ಸಂಘದ ಅಧ್ಯಕ್ಷರಾದ ಡಾ.ಎಂ.ಜೆ.ಪ್ರವೀಣ್ ಭಟ್, ಖ್ಯಾತ ಮುಳುಗು ತಜ್ಞ, ಸಮಾಜ ಸೇವಕರಾದ ಈಶ್ವರ್ ಮಲ್ಪೆ, ಪತ್ರಕರ್ತ ವಾಲ್ಟರ್ ನಂದಳಿಕೆಯವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories