ಯುಎಇದುಬೈ; ಅ.11ರಂದು 'ಗಮ್ಮತ್ ಕಲಾವಿದೆರ್ ದುಬೈ' ತಂಡದಿಂದ 'ಪೋನಗ...

ದುಬೈ; ಅ.11ರಂದು ‘ಗಮ್ಮತ್ ಕಲಾವಿದೆರ್ ದುಬೈ’ ತಂಡದಿಂದ ‘ಪೋನಗ ಕೊನೊಪರಾ..?’ ನಾಟಕ

ದುಬೈ: ಯುಎಇಯಲ್ಲಿರುವ ನಾಟಕ ಅಭಿಮಾನಿಗಳಿಗೆ ಕಳೆದ ಹಲವಾರು ವರ್ಷಗಳಿಂದ ಮನರಂಜನೆ ನೀಡುತ್ತಾ ಬಂದಿರುವ ‘ಗಮ್ಮತ್ ಕಲಾವಿದೆರ್ ದುಬೈ’ ಯುಎಇ ತಂಡವು ಅಕ್ಟೋಬರ್ 11ರಂದು ಮತ್ತೊಮ್ಮೆ ಮನರಂಜನೆ ನೀಡಲು ತಯಾರಾಗಿ ನಿಂತಿದೆ.

ಅಕ್ಟೋಬರ್ 11ರಂದು ಸಂಜೆ 5 ಗಂಟೆಗೆ ನಗರದ ಎಮಿರೇಟ್ಸ್ ಥೀಯೇಟರ್ ಉಮ್ ಅಲ್ ಸೈಫ್ ನ ಸಭಾಂಗಣದಲ್ಲಿ “ಪೋನಗ ಕೊನೊಪರಾ..?” ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿಯವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಖ್ಯಾತ ರಂಗ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ ರಚನೆಯ “ಪೋನಗ ಕೊನೊಪರಾ” ಈ ನಾಟಕವು ವಿಶೇಷ ಶೈಲಿಯಲ್ಲಿ ಮೂಡಿಬಂದಿದೆ. ಈ ನಾಟಕವು ಯುಎಇಯ ನಾಟಕ ಅಭಿಮಾನಿಗಳಿಗೆ ಇಷ್ಟವಾಗಬಹುದು. ಯುಎಇಯಲ್ಲಿ ಇರುವ ತುಳುವರು ಈ ನಾಟಕವನ್ನು ನೋಡಲೇಬೇಕು ಎಂದು ವಿನಂತಿಸಿದ್ದರಲ್ಲದೆ, ಕಾರ್ಯಕ್ರಮಕ್ಕೆ ಊರಿಂದ ಮುಖ್ಯ ಅತಿಥಿಯಾಗಿ ಖ್ಯಾತ ಜ್ಯೋತಿಷ್ಯರು, ಮುಂಬಯಿ ಸೈನ್ ಕನ್ನಡ‌ ಸಂಘದ ಅಧ್ಯಕ್ಷರಾದ ಡಾ.ಎಂ.ಜೆ.ಪ್ರವೀಣ್ ಭಟ್, ಖ್ಯಾತ ಮುಳುಗು ತಜ್ಞ, ಸಮಾಜ ಸೇವಕರಾದ ಈಶ್ವರ್ ಮಲ್ಪೆ, ಪತ್ರಕರ್ತ ವಾಲ್ಟರ್ ನಂದಳಿಕೆಯವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories