ಬಹರೈನ್ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ 'ಹೆಜ್ಜಗೊಲಿದ ಬೆಳಕು'...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ “ಹೆಜ್ಜೆ ಗೊಲಿದ ಬೆಳಕು” ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿಸೆಂಬರ್ 19ರ ಶುಕ್ರವಾರದಂದು ಅದ್ದೂರಿಯಾಗಿ ಪ್ರದರ್ಶನಗೊಳ್ಳಲಿದೆ.

ನೃತ್ಯ ವಿದುಷಿ ಸಂಸ್ಕೃತಿ ಅಭಿನಯದ ಈ ನಾಟಕ ಅಮೋಘ ನೃತ್ಯ ಮತ್ತು ಅಭಿನಯ, ಮಾತುಗಾರಿಕೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು ಈ ನಾಟಕ ನಿರ್ದೇಶನ ನೀಡಿದ್ದಾರೆ. ಬೆಳಕು ವಿನ್ಯಾಸ ಶಂಕರ್ ಕೆ ಶಿವಮೊಗ್ಗ ಮಾಡಿದ್ದು, ಸಂಗೀತ ನಿರ್ವಹಣೆ ಸಂಹಿತಾ ಜಿಪಿ ಮಾಡಲಿದ್ದಾರೆ. ಖ್ಯಾತ ಸಾಹಿತಿ ಸುಧಾ ಆಡುಕಳ ನಾಟಕ ರಚನೆ ಮಾಡಿದ್ದಾರೆ.

ಬಹರೈನ್‌ ಕನ್ನಡ ಸಂಘ ಮತ್ತು ಬಹರೈನ್‌ನಲ್ಲಿ ಉದ್ಯೋಗಿಗಳಾಗಿದ್ದು ಪ್ರಜ್ಞಾನಂ ಟ್ರಸ್ಟ್ ಬಂಧುಗಳಾಗಿರುವ ಸುರೇಶ್ ಸಿದ್ದಕೆರೆ, ಶ್ರೀನಾಥ ಚೆಕ್ಕೆ, ಕವಿತಾ ಸುರೇಶ, ರಾಮ ಪ್ರಸಾದ್ ಅಮ್ಮೆನಡ್ಕ ಈ ನಾಟಕ ಪ್ರದರ್ಶನ ಪ್ರಾಯೋಜಿಸಿದ್ದಾರೆ ಎಂದು ಉಡುಪಿ ಪ್ರಜ್ಞಾನಂ ಟ್ರಸ್ಟ್ ಅಧ್ಯಕ್ಷ ಜಿ ಪಿ ಪ್ರಭಾಕರ್ ತುಮರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Hot this week

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

Related Articles

Popular Categories