ಬಹರೈನ್ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ 'ಹೆಜ್ಜಗೊಲಿದ ಬೆಳಕು'...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ “ಹೆಜ್ಜೆ ಗೊಲಿದ ಬೆಳಕು” ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿಸೆಂಬರ್ 19ರ ಶುಕ್ರವಾರದಂದು ಅದ್ದೂರಿಯಾಗಿ ಪ್ರದರ್ಶನಗೊಳ್ಳಲಿದೆ.

ನೃತ್ಯ ವಿದುಷಿ ಸಂಸ್ಕೃತಿ ಅಭಿನಯದ ಈ ನಾಟಕ ಅಮೋಘ ನೃತ್ಯ ಮತ್ತು ಅಭಿನಯ, ಮಾತುಗಾರಿಕೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು ಈ ನಾಟಕ ನಿರ್ದೇಶನ ನೀಡಿದ್ದಾರೆ. ಬೆಳಕು ವಿನ್ಯಾಸ ಶಂಕರ್ ಕೆ ಶಿವಮೊಗ್ಗ ಮಾಡಿದ್ದು, ಸಂಗೀತ ನಿರ್ವಹಣೆ ಸಂಹಿತಾ ಜಿಪಿ ಮಾಡಲಿದ್ದಾರೆ. ಖ್ಯಾತ ಸಾಹಿತಿ ಸುಧಾ ಆಡುಕಳ ನಾಟಕ ರಚನೆ ಮಾಡಿದ್ದಾರೆ.

ಬಹರೈನ್‌ ಕನ್ನಡ ಸಂಘ ಮತ್ತು ಬಹರೈನ್‌ನಲ್ಲಿ ಉದ್ಯೋಗಿಗಳಾಗಿದ್ದು ಪ್ರಜ್ಞಾನಂ ಟ್ರಸ್ಟ್ ಬಂಧುಗಳಾಗಿರುವ ಸುರೇಶ್ ಸಿದ್ದಕೆರೆ, ಶ್ರೀನಾಥ ಚೆಕ್ಕೆ, ಕವಿತಾ ಸುರೇಶ, ರಾಮ ಪ್ರಸಾದ್ ಅಮ್ಮೆನಡ್ಕ ಈ ನಾಟಕ ಪ್ರದರ್ಶನ ಪ್ರಾಯೋಜಿಸಿದ್ದಾರೆ ಎಂದು ಉಡುಪಿ ಪ್ರಜ್ಞಾನಂ ಟ್ರಸ್ಟ್ ಅಧ್ಯಕ್ಷ ಜಿ ಪಿ ಪ್ರಭಾಕರ್ ತುಮರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories