ಬಹರೈನ್ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ 'ಹೆಜ್ಜಗೊಲಿದ ಬೆಳಕು'...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ ವಿಶಿಷ್ಟ ಏಕವ್ಯಕ್ತಿ ನಾಟಕ “ಹೆಜ್ಜೆ ಗೊಲಿದ ಬೆಳಕು” ಬಹರೈನ್‌ನ ಮನಾಮಾದ ಕನ್ನಡ ಭವನದಲ್ಲಿ ಡಿಸೆಂಬರ್ 19ರ ಶುಕ್ರವಾರದಂದು ಅದ್ದೂರಿಯಾಗಿ ಪ್ರದರ್ಶನಗೊಳ್ಳಲಿದೆ.

ನೃತ್ಯ ವಿದುಷಿ ಸಂಸ್ಕೃತಿ ಅಭಿನಯದ ಈ ನಾಟಕ ಅಮೋಘ ನೃತ್ಯ ಮತ್ತು ಅಭಿನಯ, ಮಾತುಗಾರಿಕೆ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು ಈ ನಾಟಕ ನಿರ್ದೇಶನ ನೀಡಿದ್ದಾರೆ. ಬೆಳಕು ವಿನ್ಯಾಸ ಶಂಕರ್ ಕೆ ಶಿವಮೊಗ್ಗ ಮಾಡಿದ್ದು, ಸಂಗೀತ ನಿರ್ವಹಣೆ ಸಂಹಿತಾ ಜಿಪಿ ಮಾಡಲಿದ್ದಾರೆ. ಖ್ಯಾತ ಸಾಹಿತಿ ಸುಧಾ ಆಡುಕಳ ನಾಟಕ ರಚನೆ ಮಾಡಿದ್ದಾರೆ.

ಬಹರೈನ್‌ ಕನ್ನಡ ಸಂಘ ಮತ್ತು ಬಹರೈನ್‌ನಲ್ಲಿ ಉದ್ಯೋಗಿಗಳಾಗಿದ್ದು ಪ್ರಜ್ಞಾನಂ ಟ್ರಸ್ಟ್ ಬಂಧುಗಳಾಗಿರುವ ಸುರೇಶ್ ಸಿದ್ದಕೆರೆ, ಶ್ರೀನಾಥ ಚೆಕ್ಕೆ, ಕವಿತಾ ಸುರೇಶ, ರಾಮ ಪ್ರಸಾದ್ ಅಮ್ಮೆನಡ್ಕ ಈ ನಾಟಕ ಪ್ರದರ್ಶನ ಪ್ರಾಯೋಜಿಸಿದ್ದಾರೆ ಎಂದು ಉಡುಪಿ ಪ್ರಜ್ಞಾನಂ ಟ್ರಸ್ಟ್ ಅಧ್ಯಕ್ಷ ಜಿ ಪಿ ಪ್ರಭಾಕರ್ ತುಮರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Hot this week

ಯುಎಇಯ ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಅಧ್ಯಕ್ಷರಾಗಿ...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17)...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Related Articles

Popular Categories