ಯುಎಇದುಬೈಯಲ್ಲಿ ನಾಳೆ 'ಹೆಮ್ಮೆಯ ದುಬೈ ಕನ್ನಡ ಸಂಘ'ದಿಂದ 'ದಸರಾ...

ದುಬೈಯಲ್ಲಿ ನಾಳೆ ‘ಹೆಮ್ಮೆಯ ದುಬೈ ಕನ್ನಡ ಸಂಘ’ದಿಂದ ‘ದಸರಾ ಕಪ್’ ಕ್ರಿಕೆಟ್ ಪಂದ್ಯಾಟ; ಭಾಗವಹಿಸಲಿದೆ ಪುರುಷರ 32 ತಂಡ- 8 ಮಹಿಳಾ ತಂಡಗಳು

ದುಬೈ: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ‘ಹೆಮ್ಮೆಯ ದುಬೈ ಕನ್ನಡ ಸಂಘ’ದ ವತಿಯಿಂದ ನಡೆಯಲಿರುವ 7ನೇ ವರ್ಷದ ಯುಎಇ ಕನ್ನಡಿಗರ ‘ದುಬೈ ದಸರಾ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ’ದ ಭಾಗವಾಗಿ ‘ದುಬೈ ದಸರಾ ಕಪ್’ ಕ್ರಿಕೆಟ್ ಪಂದ್ಯಾವಳಿ ಡಿಸೆಂಬರ್ 7ರಂದು ದುಬೈಯ ಅಲ್ ಕಿಸೆಸ್ಸ್ ನ MMCT ಮೈದಾನದಲ್ಲಿ ನಡೆಯಲಿದೆ.

ಬೆಳಗ್ಗೆ 9ರಿಂದ ಸಂಜೆ 6ರ ವರಗೆ 3 ಮತ್ತು 5 ಮೈದಾನಗಳಲ್ಲಿ ಒಂದೇ ಸಮಯದಲ್ಲಿ ನಡೆಯಲಿದೆ. ಈ ಕ್ರಿಕೆಟ್ ಪಂದ್ಯಾವಳಿಗಳು ಸಂಯುಕ್ತ ಅರಬ್ ಸಂಸ್ಥಾನ(UAE)ದಲ್ಲಿ ನೆಲಸಿರುವ ಸಮಸ್ತ ಅನಿವಾಸಿ ಪುರುಷ ಮತ್ತು ಮಹಿಳಾ ಕನ್ನಡಿಗರಿಗೆ ಆಯೋಜಿಸಲಾಗಿದೆ. ಈ ದಸರಾ ಕಪ್ ಪಂದ್ಯಾವಳಿಯಲ್ಲಿ ಒಟ್ಟು 32 ಪುರುಷರ ತಂಡ ಮತ್ತು 8 ಮಹಿಳಾ ತಂಡಗಳು ಸೇರಿ ಒಟ್ಟು 40 ತಂಡಗಳು ಪ್ರತಿಷ್ಠಿತ ‘ದುಬೈ ದಸರಾ ಟ್ರೋಫಿ’ಗಾಗಿ ಸೆಣಸಾತ ನಡೆಸಲಿವೆ.

ಪಂದ್ಯಾವಳಿಗಳ ವೇಳಾಪಟ್ಟಿ ತಯಾರಿ ಮತ್ತು ಆಯೋಜಕರೊಂದಿಗೆ ತಂಡದ ನಾಯಕರ ಸಮಾಲೋಚನೆ ಸಭೆ ಹಾಗೂ ತಂಡದ ಜೆರ್ಸಿ ಅನಾವರಣ ಇತ್ತೀಚೆಗೆ ಕರಾಮದಲ್ಲಿರುವ ಯುನಿಕ್ ವರ್ಲ್ಡ್ ಸೆಂಟರ್ ಬೋರ್ಡ್ ರೂಮಿನಲ್ಲಿ ನಡೆಯಿತು. ಎಲ್ಲಾ 40 ತಂಡಗಳ ಪ್ರತಿನಿಧಿ ಆಗಮಿಸಿ ಪಂದ್ಯದಲ್ಲಿ ಪಾಲಿಸಬೇಕಾದ ನೀತಿ ನಿಯಮಗಳನ್ನು ಕ್ರಿಕೆಟ್ ಆಯೋಜಕ ಸಮಿತಿಯ ಕ್ಲಿವನ್ ಅವರಿಂದ ಮಾಹಿತಿ ಪಡೆದರು. ಸಭೆಯಲ್ಲಿ ದಸರಾ ಕಪ್ ಕ್ರಿಕೆಟ್ ಆಯೋಜಕರಾದ ಹೆಮ್ಮೆಯ ದುಬೈ ಕನ್ನಡ ಸಂಘದ ರಫೀಕಲಿ ಕೊಡಗು, ಶಂಕರ್ ಬೆಳಗಾವಿ, ಪ್ರತಾಪ್ ಮಡಿಕೇರಿ, ಅಯೂಬ್ ಶಿವಮೊಗ್ಗ, ನಝೀರ ಮಂಡ್ಯ, ರಂಗ ಬೆಂಗಳೂರು, ಬಾಸಿತ್ ಉಡುಪಿ ಮುಂತಾದವರು ಉಪಸ್ಥಿತರಿದ್ದರು.

ದುಬೈ ದಸರಾದ ಮುಖ್ಯ ಕಾರ್ಯಕ್ರಮವಾದ ಕ್ರೀಡೋತ್ಸವ ಡಿಸೆಂಬರ್ 21ರಂದು ಬೆಳಗ್ಗೆ 8ರಿಂದ ರಾತ್ರಿ 11ರವರೆಗೆ ಬಹಳ ಅದ್ದೂರಿಯಾಗಿ ಎಥಿಸಲಾತ್ ಸ್ಪೋರ್ಟ್ಸ್ ಅಕಾಡೆಮಿ ಲೀಸರ್ ಕ್ಲಬ್ಬಿನಲ್ಲಿ ನಡೆಯಲಿದೆ. ಅಂದು ಮಕ್ಕಳು ಮಹಿಳೆಯರು ಮತ್ತು ಪುರುಷರಿಗೆ ವಿವಿಧ ರೀತಿಯ ಕ್ರೀಡೆ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ತಾಯಿನಾಡಿನಿಂದ ಖ್ಯಾತ ಕಲಾವಿದರನ್ನು ಕರೆಸಿ ಆಗಮಿಸಿದ ಅನಿವಾಸಿ ದುಬೈ ಕನ್ನಡಿಗರಿಗೆ ಸಂಗೀತ ಸಂಜೆಯ ರಸದೌತಣ ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Hot this week

ಯುಎಇಯ ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಅಧ್ಯಕ್ಷರಾಗಿ...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17)...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Related Articles

Popular Categories