ಬಹರೈನ್ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ...

ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ ಬೀಳ್ಕೊಡುಗೆ-ಸನ್ಮಾನ ಸಮಾರಂಭ

ಬಹರೈನ್‌: ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಸಕ್ರಿಯ ಸದಸ್ಯರಾದ ಯಕ್ಷಿತ್ ಶೆಟ್ಟಿ ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಬುಧವಾರದಂದು ಕನ್ನಡ ಭವನದ ಡಾ.ರೊನಾಲ್ಡ್ ಕೊಲಾಸೋ ಲೌಂಜ್ ನಲ್ಲಿ ಆಯೋಜಿಸಲಾಯಿತು.

ಕನ್ನಡ ಸಂಘ ಬಹರೈನ್‌ನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಯಕ್ಷಿತ್ ಶೆಟ್ಟಿ ಅವರು ನೀಡಿದ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ಗುರುತಿಸಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಯಕ್ಷಿತ್ ಶೆಟ್ಟಿ ಅವರಿಗೆ ಹಾರ, ಶಾಲು, ಸ್ಮರಣಿಕೆಯಿಂದ ಕೃತಜ್ಞತೆಯ ಸಂಕೇತವಾಗಿ ಗೌರವ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷ ಅಜಿತ್ ಬಂಗೇರ, ಪದಾಧಿಕಾರಿಗಳು ಮತ್ತು ಸದಸ್ಯರು, ಸಂಘದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಿ, ಅವರ ಸೇವಾಭಾವನೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು. ಹಾಜರಿದ್ದ ಸದಸ್ಯರು ಯಕ್ಷಿತ್ ಶೆಟ್ಟಿ ಅವರ ಮುಂದಿನ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ವರದಿ: ಕಮಲಾಕ್ಷ ಅಮೀನ್

Hot this week

ದುಬೈಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬೈ: ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬೈಯಲ್ಲಿ ಸಾಮೂಹಿಕ ಶ್ರೀ...

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ 'ಸ್ನೇಹ...

ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಕರಾವಳಿ ಕರ್ನಾಟಕದ ಜನಪ್ರಿಯ ಕಲೆಯಾಗಿರುವ ಯಕ್ಷಗಾನವು...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ...

ದುಬೈ; ‘ಗಲ್ಫ್ ಫುಡ್ 2026’ ಮೇಳದಲ್ಲಿ ಮಿಂಚಿದ ‘ನಂದಿನಿ’

ದುಬೈ: ಯುಎಇಯಲ್ಲಿ 31 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವದ ಅತಿದೊಡ್ಡ...

Related Articles

Popular Categories