ಬಹರೈನ್ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ...

ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ ಬೀಳ್ಕೊಡುಗೆ-ಸನ್ಮಾನ ಸಮಾರಂಭ

ಬಹರೈನ್‌: ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಸಕ್ರಿಯ ಸದಸ್ಯರಾದ ಯಕ್ಷಿತ್ ಶೆಟ್ಟಿ ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಬುಧವಾರದಂದು ಕನ್ನಡ ಭವನದ ಡಾ.ರೊನಾಲ್ಡ್ ಕೊಲಾಸೋ ಲೌಂಜ್ ನಲ್ಲಿ ಆಯೋಜಿಸಲಾಯಿತು.

ಕನ್ನಡ ಸಂಘ ಬಹರೈನ್‌ನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಯಕ್ಷಿತ್ ಶೆಟ್ಟಿ ಅವರು ನೀಡಿದ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ಗುರುತಿಸಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಯಕ್ಷಿತ್ ಶೆಟ್ಟಿ ಅವರಿಗೆ ಹಾರ, ಶಾಲು, ಸ್ಮರಣಿಕೆಯಿಂದ ಕೃತಜ್ಞತೆಯ ಸಂಕೇತವಾಗಿ ಗೌರವ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷ ಅಜಿತ್ ಬಂಗೇರ, ಪದಾಧಿಕಾರಿಗಳು ಮತ್ತು ಸದಸ್ಯರು, ಸಂಘದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಿ, ಅವರ ಸೇವಾಭಾವನೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು. ಹಾಜರಿದ್ದ ಸದಸ್ಯರು ಯಕ್ಷಿತ್ ಶೆಟ್ಟಿ ಅವರ ಮುಂದಿನ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ವರದಿ: ಕಮಲಾಕ್ಷ ಅಮೀನ್

Hot this week

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

Related Articles

Popular Categories