ಬಹರೈನ್ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ...

ಬಹರೈನ್ ಕನ್ನಡ ಸಂಘದ ಸಕ್ರಿಯ ಸದಸ್ಯ ಯಕ್ಷಿತ್ ಶೆಟ್ಟಿಗೆ ಬೀಳ್ಕೊಡುಗೆ-ಸನ್ಮಾನ ಸಮಾರಂಭ

ಬಹರೈನ್‌: ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಸಕ್ರಿಯ ಸದಸ್ಯರಾದ ಯಕ್ಷಿತ್ ಶೆಟ್ಟಿ ಅವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವನ್ನು ಬುಧವಾರದಂದು ಕನ್ನಡ ಭವನದ ಡಾ.ರೊನಾಲ್ಡ್ ಕೊಲಾಸೋ ಲೌಂಜ್ ನಲ್ಲಿ ಆಯೋಜಿಸಲಾಯಿತು.

ಕನ್ನಡ ಸಂಘ ಬಹರೈನ್‌ನ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಯಕ್ಷಿತ್ ಶೆಟ್ಟಿ ಅವರು ನೀಡಿದ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ಗುರುತಿಸಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷ ಅಜಿತ್ ಬಂಗೇರ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಯಕ್ಷಿತ್ ಶೆಟ್ಟಿ ಅವರಿಗೆ ಹಾರ, ಶಾಲು, ಸ್ಮರಣಿಕೆಯಿಂದ ಕೃತಜ್ಞತೆಯ ಸಂಕೇತವಾಗಿ ಗೌರವ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಅಧ್ಯಕ್ಷ ಅಜಿತ್ ಬಂಗೇರ, ಪದಾಧಿಕಾರಿಗಳು ಮತ್ತು ಸದಸ್ಯರು, ಸಂಘದ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಿ, ಅವರ ಸೇವಾಭಾವನೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು. ಹಾಜರಿದ್ದ ಸದಸ್ಯರು ಯಕ್ಷಿತ್ ಶೆಟ್ಟಿ ಅವರ ಮುಂದಿನ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ವರದಿ: ಕಮಲಾಕ್ಷ ಅಮೀನ್

Hot this week

ಯುರೋಪಿನಾದ್ಯಂತ ಭಾರತೀಯ ಕಲಾಪ್ರಕಾರಗಳಿಗೆ ಆಸರೆಯಾಗಿರುವ ‘ಬೆಲ್ಜಿಯಂ ಕಲಾ ವೇದಿಕೆ’

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ದೂರದ ಯುರೋಪಿನ ನೆಲದಲ್ಲಿ ಭಾರತೀಯ ಕಲಾಪ್ರಕಾರಗಳನ್ನು,...

55th International Cultural Fest and Cultural Exchange Programme concludes in Dubai

Dubai, July 26: The 55th International Cultural Fest and...

ಖತರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಖತರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ...

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

Related Articles

Popular Categories