ಯುಎಇಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ

ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ ಒಕ್ಕಲಿಗ ಸಮಾಜದ ಅನಿವಾಸಿಗಳು “ಫೌಲರ್ ಪಾರ್ಕ್” ಪೆವಿಲಿಯನ್ ನಲ್ಲಿ ತಮ್ಮ ಮೊದಲ ಮಿಲನ ಸಮಾವೇಶವನ್ನು ಆಯೋಜಿಸಿದ್ದರು.

ಕನ್ನಡ ನಾಡಿನ ರೈತಾಪಿ ಸಮಾಜದ ಹಿನ್ನೆಲೆಯುಳ್ಳ ಅಟ್ಲಾಂಟದ ಅನಿವಾಸಿ ಒಕ್ಕಲಿಗ ಸಮಾಜವನ್ನು ಒಂದುಗೂಡಿಸಿ ತಮ್ಮ ಸಾಂಸ್ಕೃತಿಕ ಮೂಲವನ್ನು ಸಂಭ್ರಮಿಸಲು ಹಾಗೂ ಮುಂದಿನ ಪೀಳಿಗೆಗೂ ಪರಿಚಯಿಸುವ ಉದ್ದೇಶದಿಂದ ವಿ.ಟಿ.ದಯಾನಂದ ಅವರ ನೇತೃತ್ವದಲ್ಲಿ ಈ ಸಮಾವೇಶವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.
ಹವಾಮಾನ ವೈಪರೀತ್ಯದ ಕಾರಣ ಅತಿಯಾದ ಚಳಿಗಾಳಿ ಇದ್ದರೂ ಸಹ ಸುಮಾರು 150ಕ್ಕೂ ಹೆಚ್ಚು ಒಕ್ಕಲಿಗ ಸಮಾಜದ ಅನಿವಾಸಿಗಳು ಸಂತೋಷ, ಸಂಭ್ರಮದಿಂದ ಭಾಗವಹಿಸಿದ್ದರು.

ಆಯೋಜಕರಾದ ವಿ.ಟಿ.ದಯಾನಂದ್ ಮತ್ತು ಅವರ ಸ್ನೇಹಿತರು ಒಗ್ಗೂಡಿ, ಶ್ರಮವಹಿಸಿ ಕರ್ನಾಟಕದ ಗ್ರಾಮೀಣ ಶೈಲಿಯ ಮಾಂಸಾಹಾರಿ ಮತ್ತು ಸಸ್ಯಾಹಾರಿ ಭರ್ಜರಿ ಭೋಜನವನ್ನು ತಯಾರಿಸಿ ಉಣಬಡಿಸಿ ಎಲ್ಲರ ಮನಗೆದ್ದರು.

ಅಟ್ಲಾಂಟ ನಗರದಲ್ಲಿ ಹಲವಾರು ವರ್ಷಗಳಿಂದ ನೆಲೆಸಿದ್ದರೂ ಸಹ ತಮ್ಮ ಸಮಾಜದ ಇಷ್ಟೊಂದು ಅನಿವಾಸಿಗಳಿದ್ದರೂ ಪರಸ್ಪರ ಪರಿಚಯವಿಲ್ಲದೆ ಒಕ್ಕಲಿಗರು ಈ ಭೇಟಿ ಮತ್ತು ಮಿಲನದ ಮೂಲಕ ಒಂದಾಗುವ ಸದಾವಕಾಶ ದೊರೆಯಿತು. ಸಂಗೀತ ಅವರಿಂದ ನೆರೆದಿದ್ದ ಸಮಾಜದ ಬಂಧುಗಳಿಗೆ ವಿವಿಧ ಮನರಂಜನಾ ಕಾರ್ಯಕ್ರಮ ಹಾಗೂ ಕೆ. ಆರ್. ಶ್ರೀನಾಥ್ ಅವರಿಂದ ಕನ್ನಡ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು. ಮಕ್ಕಳಿಗೂ ಸಹ ಆಟಗಳನ್ನು ಏರ್ಪಡಿಸಲಾಗಿತ್ತು.

ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅಟ್ಲಾಂಟದ ಒಕ್ಕಲಿಗರನ್ನು ಸೇರಿಸಿ ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಕಾರ್ಯಕ್ರಮಗಳನ್ನು ಮುನ್ನಡೆಸಬೇಕೆಂಬ ರೂಪುರೇಷೆಗಳನ್ನು ಚರ್ಚಿಸಿ ಅನುಷ್ಟಾನಗೊಳಿಸಲು ತೀರ್ಮಾನಿಸಲಾಯಿತು. ಅಟ್ಲಾಂಟ ಕನ್ನಡಿಗರ ಮಾತೃ ಸಂಸ್ಥೆಯಾದ ನೃಪತುಂಗ ಕನ್ನಡ ಕೂಟದ ಸದಸ್ಯತ್ವವನ್ನು ಪಡೆದು, ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಕನ್ನಡ ಭಾಷಾ ಪ್ರೇಮವನ್ನು ಮೆರೆಯಬೇಕೆಂದು ನೆರೆದಿದ್ದ ಒಕ್ಕಲಿಗರನ್ನು ಮನವಿ ಮಾಡಿಕೊಳ್ಳಲಾಯಿತು.

ಈ ಮೊದಲ ಭೇಟಿಯು ಅಟ್ಲಾಂಟ ಒಕ್ಕಲಿಗರಿಗೆ ಹರ್ಷಮಯವಾಗಿತ್ತು. ಕಾರ್ಯಕ್ರಮವನ್ನು ಆಯೋಜಿಸಿದ ವಿ.ಟಿ. ದಯಾನಂದ್ ಮತ್ತು ಅವರ ಸಹ ಆಯೋಜಕರಿಗೆ ಅಟ್ಲಾಂಟ ಒಕ್ಕಲಿಗರೆಲ್ಲರಿಂದ ಹೃತ್ಪೂರ್ವಕವಾಗಿ ಮೆಚ್ಚುಗೆ ಹಾಗೂ ಅಭಿನಂದನೆ ಅರ್ಪಿಸಲಾಯಿತು.

Hot this week

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

Related Articles

Popular Categories