ಯುಎಇಡಾ.ತುಂಬೆ ಮೊಯ್ದಿನ್ ರಿಗೆ ಪ್ರತಿಷ್ಠಿತ "ಗ್ಲೋಬಲ್ ವಿಷನರಿ ಎನ್...

ಡಾ.ತುಂಬೆ ಮೊಯ್ದಿನ್ ರಿಗೆ ಪ್ರತಿಷ್ಠಿತ “ಗ್ಲೋಬಲ್ ವಿಷನರಿ ಎನ್ ಆರ್ ಐ ಪ್ರಶಸ್ತಿ”

ಅಜ್ಮಾನ್: ತುಂಬೆ ಗ್ರೂಪ್ ನ ಸ್ಥಾಪಕ ಅಧ್ಯಕ್ಷ ಮತ್ತು ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ನ ಪೋಷಕರಾದ ಡಾ.ತುಂಬೆ ಮೊಯ್ದಿನ್ ಅವರಿಗೆ ಬ್ಯಾರೀಸ್ ಕಲ್ಚರಲ್ ಫೋರಂ-ಯುಎಇ ವತಿಯಿಂದ “ಗ್ಲೋಬಲ್ ವಿಷನರಿ ಎನ್ ಆರ್ ಐ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಯುಎಇ ಅಜ್ಮಾನ್‌ ನ ತುಂಬೆ ಮೆಡಿಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಡಾ. ತುಂಬೆ ಮೊಯ್ದಿನ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಜಾಗತಿಕ ಆರೋಗ್ಯ ರಕ್ಷಣೆ, ಶಿಕ್ಷಣ, ಸಂಶೋಧನಾ ಕ್ಷೇತ್ರಕ್ಕೆ ಡಾ. ಮೊಯ್ದಿನ್ ಅವರ ಅಮೋಘ ಕೊಡುಗೆಗಳನ್ನು ಗುರುತಿಸಿ “ಗ್ಲೋಬಲ್ ವಿಷನರಿ ಎನ್ ಆರ್ ಐ ಪ್ರಶಸ್ತಿ” ಯನ್ನು ನೀಡಲಾಗಿದೆ. ಡಾ. ಮೊಯ್ದಿನ್ ಅವರು ತುಂಬೆ ಗ್ರೂಪ್ ಅನ್ನು ಜಾಗತಿಕ ಬ್ರ್ಯಾಂಡ್ ಆಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವದಾದ್ಯಂತ ಇರುವ ಅನಿವಾಸಿ ಭಾರತೀಯರಿಗೆ ಅವರು ಸ್ಫೂರ್ತಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ತುಂಬೆ ಮೆಡಿಸಿಟಿಯನ್ನು ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಶ್ರೇಷ್ಠ ಕೇಂದ್ರವಾಗಿ ನಿರ್ಮಿಸುವಲ್ಲಿ ಡಾ.ಮೊಯ್ದಿನ್ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ತುಂಬೆ ಮೊಯ್ದಿನ್, ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಕ್ಕೆ ಬ್ಯಾರೀಸ್ ಕಲ್ಚರಲ್ ಫೋರಂ(BCF)ಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಸಂಶೋಧನೆ ಮತ್ತು ಸಮುದಾಯ ಕಲ್ಯಾಣವನ್ನು ಬೆಳೆಸುವಲ್ಲಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ನಾನು ಈ ಗೌರವವನ್ನು ನನ್ನ ಅದ್ಭುತ ತಂಡಕ್ಕೆ ಅರ್ಪಿಸುತ್ತೇನೆ, ಅವರ ಅಚಲ ಸಮರ್ಪಣೆ ನಮ್ಮ ಯಶಸ್ಸಿಗೆ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories