ಯುಎಇಸೆಪ್ಟೆಂಬರ್ 21ರಂದು ಕೆಸಿಎಫ್ ದುಬೈ ಸೌತ್ ಝೋನ್ ಆಶ್ರಯದಲ್ಲಿ...

ಸೆಪ್ಟೆಂಬರ್ 21ರಂದು ಕೆಸಿಎಫ್ ದುಬೈ ಸೌತ್ ಝೋನ್ ಆಶ್ರಯದಲ್ಲಿ ‘ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್’; ಸ್ವಾಗತ ಸಮಿತಿ ರಚನೆ

ದುಬೈ: ಕೆಸಿಎಫ್ ದುಬೈ ಸೌತ್ ಝೋನ್ ಪ್ರತಿ ವರ್ಷವೂ ನಡೆಸುವ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್ ನ 2025ನೇ ಸಾಲಿನ ಕಾರ್ಯಕ್ರಮದ ಸ್ವಾಗತ ಸಮಿತಿಯ ರಚನೆಯು ದುಬೈ ಬಿಸಿನೆಸ್ ಬೇಯಲ್ಲಿರುವ ಬೇ ಬೈಟ್ಸ್ ಹೋಟೇಲಲ್ಲಿ ರವಿವಾರದಂದು ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಅವರು, ಪ್ರವಾದಿ (ಸ.ಅ) ರವರ 1500ನೇ ಜನ್ಮ ದಿನಾಚರಣೆಯನ್ನು ದುಬೈ ಸೌತ್ ಝೋನ್ ಈ ಬಾರಿ ವಿಜೃಂಭಣೆಯಿಂದ ಆಚರಿಸಲಿದೆ. ಪ್ರವಾದಿ ಕೀರ್ತನೆಗಳು ಮತ್ತು ಮದ್ಹ್ ಪ್ರಭಾಷಣಗಳನ್ನೊಳಗೊಂಡ ಪ್ರಸ್ತುತ ಗ್ರ್ಯಾಂಡ್ ಮಿಲಾದ್ ಕಾನ್ಫರೆನ್ಸ್-2025, ಸೆಪ್ಟೆಂಬರ್ 21 ರವಿವಾರ ದುಬೈ ಊದ್ ಮೇತ ಪಾಕಿಸ್ತಾನ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲರೂ ಕೈಜೊಡಿಸಬೇಕೆಂದು ಮನವಿ ಮಾಡಿದರು.

ಸ್ವಾಗತ ಸಮಿತಿಯ ಚೇರ್ಮ್ಯಾನ್ ಆಗಿ ಇಕ್ಬಾಲ್ ಸಿದ್ದಕಟ್ಟೆ, ವರ್ಕಿಂಗ್ ಚೇರ್ಮ್ಯಾನ್ ನಝೀರ್ ಹಾಜಿ ಕೆಮ್ಮಾರ, ಕನ್ವೀನರ್ ರಜಬ್ ಉಚ್ಚಿಲ, ವರ್ಕಿಂಗ್ ಕನ್ವೀನರ್ ಆಸಿಫ್ ಇಂದ್ರಾಜೆ, ಫಿನಾನ್ಶ್ಯಲ್ ಚೇರ್ಮ್ಯಾನ್ ಇಲ್ಯಾಸ್ ಮೂಳೂರು, ಫಿನಾನ್ಸ್ ಕನ್ವೀನರ್ ರವೂಫ್ ಸಾಗರ, ಅಶ್ಫಾಕ್ ಕೊಡಗು ಹಾಗೂ ಖಾದರ್ ಕಯ್ಯೂರು ಸೇರದಂತೆ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಕೆಸಿಎಫ್ ದುಬೈ ಸೌತ್ ಝೊನ್ ಅಧ್ಯಕ್ಷ ಇಲ್ಯಾಸ್ ಮದನಿ ಬರ್ಷಾ ವಹಿಸಿದ್ದರು. ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕೆಸಿಎಫ್ ಸಂಘಟನಾ ನಾಯಕರಾದ ರಜಬ್ ಉಚ್ಚಿಲ, ಹಮೀದ್ ಹಾಜಿ ಸ್ಟಾರ್ ಲಿಂಕ್, ಇಲ್ಯಾಸ್ ಮೂಳೂರು, ರವೂಫ್ ಸಾಗರ, ನವಾಝ್ ಹಾಜಿ ಕೋಟೆಕಾರ್, ನಝೀರ್ ಹಾಜಿ, ಇಕ್ಬಾಲ್ ಹಾಜಿ ಸಿದ್ದಕಟ್ಟೆ ಸೇರಿದಂತೆ ಝೋನ್, ಸೆಕ್ಟರ್ ಹಾಗೂ ಶಾಖೆಯ ನಾಯಕರು ಭಾಗವಹಿಸಿದ್ದರು. ಝೋನ್ ಕಾರ್ಯದರ್ಶಿ ಮನ್ಸೂರ್ ಹರೇಕಳ ಸ್ವಾಗತಿಸಿದರು, ರಫೀಕ್ ಕಲ್ಲಡ್ಕ ವಂದಿಸಿದರು. ಅಝೀಝ್ ಅಹ್ಸನಿ ಕಾರ್ಯಕ್ರಮ‌ವನ್ನು ನಿರೂಪಿಸಿದರು.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories