ಸೌದಿ ಅರೇಬಿಯಾ'ಹಜ್ಜ್' ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳಿಗೆ ಭವ್ಯ ಸ್ವಾಗತ...

‘ಹಜ್ಜ್’ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳಿಗೆ ಭವ್ಯ ಸ್ವಾಗತ ಕೋರಿದ KCF HVC ತಂಡ

ಮದೀನಾ: ಪವಿತ್ರ ಹಜ್ಜ್ ಕಾರ್ಯ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ ನ್ಯಾಷನಲ್ ಏರ್ಪೋರ್ಟ್ ತಲುಪಿದೆ.

ಇಂದು ಭಾರತದ ಹೈದರಾಬಾದ್ ಹಾಗೂ ಲಕ್ನೋ ದಿಂದ 578 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ನ ಹಜ್ಜ್ ವಾಲೇಂಟಿಯರ್ ಕೋರ್ ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.

ಇಂಡಿಯನ್ ಅಂಬಾಸಿಡರ್ ಡಾ.ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು.

ಕೆಸಿಎಫ್ ಹೆಚ್.ವಿ.ಸಿ ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್ ಗೆ ತೆರಳಿ ಸಹಕರಿಸಿದರು. ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು ಹಾಗೂ ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು.

ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿಎ.ಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು. ಇಂದು ರಾತ್ರಿ 7.30 ವೇಳೆಗೆ ಮುಂಬೈಯಿಂದ 442 ಹಾಜಿಗಳು ಆಗಮಿಸಲಿದ್ದಾರೆ. ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರವಾದ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನಧ್ಧರಾಗಿದ್ದಾರೆ.
ವರದಿ : ಹಕೀಂ ಬೋಳಾರ್

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories