ಯುಎಇಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್...

ಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್ ಅಲ್ ಖೈಮಾದಲ್ಲಿ ಕೇರಳ ಮೂಲದ ಯುವಕ ಮೃತ್ಯು

ದುಬೈ: ಗುರುವಾರ ಮುಂಜಾನೆಯಿಂದ ಯುಎಇಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ-ಗಾಳಿಗೆ ಭಾರತೀಯ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ರಾಸ್ ಅಲ್ ಖೈಮಾದಲ್ಲಿ ವರದಿಯಾಗಿದೆ.

ದುಬೈ, ಅಬುಧಾಬಿ, ಶಾರ್ಜಾ, ಅಜ್ಮಾನ್, ರಾಸ್ ಅಲ್ ಖೈಮಾ ಸೇರಿದಂತೆ ಹಲವೆಡೆ ಗುರುವಾರ ಮುಂಜಾನೆಯಿಂದ ಭಾರಿ ಮಳೆ, ಗಾಳಿ ಬೀಸುತ್ತಿದ್ದು, ರಾತ್ರಿ ಗುಡುಗು, ಮಿಂಚು ಸಹಿತ ಮಳೆ ಆರ್ಭಟ ಜೋರಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ರಾಸ್ ಅಲ್ ಖೈಮಾದಲ್ಲಿ ಸುರಿದ ಭಾರಿ ಮಳೆ-ಗಾಳಿಗೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಭಾರತೀಯ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಮಲಪ್ಪುರಂ ಜಿಲ್ಲೆಯ ಕೊಡಿಂಜಿ ನಿವಾಸಿ ಸಲ್ಮಾನ್ ಫಾರಿಸ್ (27) ಎಂದು ಗುರುತಿಸಲಾಗಿದೆ.

ರಾಸ್ ಅಲ್ ಖೈಮಾದ ಇಸ್ತಾಂಬುಲ್ ಶವರ್ಮಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್, ಬಿರುಗಾಳಿಯಲ್ಲಿ ಕಟ್ಟಡದಿಂದ ಬಿದ್ದು ಬಂದ ಕಲ್ಲು ದೇಹಕ್ಕೆ ತಗುಲಿದ ಪರಿಣಾಮ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಅವರು ಮಲಪ್ಪುರಂ ನನ್ನಂಪುರ ತಾಲೂಕಿನ ತಲಕ್ಕೊಟ್ಟ ತೊಡಿಕ ನಿವಾಸಿಗಳಾದ ಸುಲೈಮಾನ್–ಅಸ್ಮಾಬಿ ದಂಪತಿಯ ಪುತ್ರರಾಗಿದ್ದಾನೆ.

ಮೃತ ಯುವಕ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಕೆಲ ತಿಂಗಳ ಹಿಂದೆಯಷ್ಟೇ ಯುಎಇಗೆ ಮರಳಿದ್ದನು. ಅಪಘಾತ ಸಂಭವಿಸಿದ ವೇಳೆ ಅವನು ಶಾವರ್ಮಾವನ್ನು ವಿತರಿಸಲು ಹೊರಟಿದ್ದ ಎನ್ನಲಾಗಿದೆ.

ಯುಎಇಯಾದ್ಯಂತ ಮಿಂಚು ಸಹಿತ ಜಿಟಿಪಿಟಿ ಮಳೆ ಮುಂದುವರಿದ್ದಿದ್ದು, ಶುಕ್ರವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಉದ್ಯಾನವನಗಳು ಮತ್ತು ಕಡಲತೀರಗಳನ್ನು ಪ್ರವೇಶಿಸದಂತೆ ಎಚ್ಚರಿಕೆ ಕೂಡ ನೀಡಲಾಗಿದೆ. ಈ ನಡುವೆ, ಪೊಲೀಸ್ ಪಡೆ, ಆಂಬ್ಯುಲೆನ್ಸ್ ಹಾಗೂ ಸಿವಿಲ್ ಡಿಫೆನ್ಸ್ ವಿಭಾಗಗಳು ಸಂಪೂರ್ಣ ಸನ್ನದ್ಧತೆಯಿಂದ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hot this week

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ...

ದುಬೈ; ಅದ್ದೂರಿಯಾಗಿ ನಡೆದ ಯುಎಇ ಬಂಟ್ಸ್‌ನ 48ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಬಂಟರ ಸಮಾಗಮ

​ದುಬೈ: ಇಲ್ಲಿನ ಶೇಖ್ ಝಾಯೆದ್ ರಸ್ತೆಯಲ್ಲಿರುವ ಮಿಲೆನಿಯಂ ಪ್ಲಾಝಾ ಹೋಟೆಲ್‌ನ ಸಭಾಂಗಣದಲ್ಲಿ...

Al Qamar Moolur Family fest held in Umm Al Quwain

Umm Al Quwain: Al Qamar Moolur Family Fest 2025...

ಕಲಾದರ್ಪಣ 2025: ಕುವೈತ್ ಕನ್ನಡ ಕೂಟದ ಅದ್ದೂರಿ ರಾಜ್ಯೋತ್ಸವ; ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಸಮ್ಮಿಲನ

ಕುವೈತ್: ಕುವೈತ್ ಕನ್ನಡ ಕೂಟ ಒಂದು ಸಾಮಾಜಿಕ-ಸಾಂಸ್ಕೃತಿಕ ಸಂಘಟನೆ, 41 ವರ್ಷಗಳಿಂದ...

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

Related Articles

Popular Categories