ಯುಎಇಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್...

ಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್ ಅಲ್ ಖೈಮಾದಲ್ಲಿ ಕೇರಳ ಮೂಲದ ಯುವಕ ಮೃತ್ಯು

ದುಬೈ: ಗುರುವಾರ ಮುಂಜಾನೆಯಿಂದ ಯುಎಇಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ-ಗಾಳಿಗೆ ಭಾರತೀಯ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ರಾಸ್ ಅಲ್ ಖೈಮಾದಲ್ಲಿ ವರದಿಯಾಗಿದೆ.

ದುಬೈ, ಅಬುಧಾಬಿ, ಶಾರ್ಜಾ, ಅಜ್ಮಾನ್, ರಾಸ್ ಅಲ್ ಖೈಮಾ ಸೇರಿದಂತೆ ಹಲವೆಡೆ ಗುರುವಾರ ಮುಂಜಾನೆಯಿಂದ ಭಾರಿ ಮಳೆ, ಗಾಳಿ ಬೀಸುತ್ತಿದ್ದು, ರಾತ್ರಿ ಗುಡುಗು, ಮಿಂಚು ಸಹಿತ ಮಳೆ ಆರ್ಭಟ ಜೋರಾಗಿತ್ತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ರಾಸ್ ಅಲ್ ಖೈಮಾದಲ್ಲಿ ಸುರಿದ ಭಾರಿ ಮಳೆ-ಗಾಳಿಗೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಭಾರತೀಯ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಮಲಪ್ಪುರಂ ಜಿಲ್ಲೆಯ ಕೊಡಿಂಜಿ ನಿವಾಸಿ ಸಲ್ಮಾನ್ ಫಾರಿಸ್ (27) ಎಂದು ಗುರುತಿಸಲಾಗಿದೆ.

ರಾಸ್ ಅಲ್ ಖೈಮಾದ ಇಸ್ತಾಂಬುಲ್ ಶವರ್ಮಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್, ಬಿರುಗಾಳಿಯಲ್ಲಿ ಕಟ್ಟಡದಿಂದ ಬಿದ್ದು ಬಂದ ಕಲ್ಲು ದೇಹಕ್ಕೆ ತಗುಲಿದ ಪರಿಣಾಮ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಅವರು ಮಲಪ್ಪುರಂ ನನ್ನಂಪುರ ತಾಲೂಕಿನ ತಲಕ್ಕೊಟ್ಟ ತೊಡಿಕ ನಿವಾಸಿಗಳಾದ ಸುಲೈಮಾನ್–ಅಸ್ಮಾಬಿ ದಂಪತಿಯ ಪುತ್ರರಾಗಿದ್ದಾನೆ.

ಮೃತ ಯುವಕ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಕೆಲ ತಿಂಗಳ ಹಿಂದೆಯಷ್ಟೇ ಯುಎಇಗೆ ಮರಳಿದ್ದನು. ಅಪಘಾತ ಸಂಭವಿಸಿದ ವೇಳೆ ಅವನು ಶಾವರ್ಮಾವನ್ನು ವಿತರಿಸಲು ಹೊರಟಿದ್ದ ಎನ್ನಲಾಗಿದೆ.

ಯುಎಇಯಾದ್ಯಂತ ಮಿಂಚು ಸಹಿತ ಜಿಟಿಪಿಟಿ ಮಳೆ ಮುಂದುವರಿದ್ದಿದ್ದು, ಶುಕ್ರವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಉದ್ಯಾನವನಗಳು ಮತ್ತು ಕಡಲತೀರಗಳನ್ನು ಪ್ರವೇಶಿಸದಂತೆ ಎಚ್ಚರಿಕೆ ಕೂಡ ನೀಡಲಾಗಿದೆ. ಈ ನಡುವೆ, ಪೊಲೀಸ್ ಪಡೆ, ಆಂಬ್ಯುಲೆನ್ಸ್ ಹಾಗೂ ಸಿವಿಲ್ ಡಿಫೆನ್ಸ್ ವಿಭಾಗಗಳು ಸಂಪೂರ್ಣ ಸನ್ನದ್ಧತೆಯಿಂದ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories