ಕುವೈತ್ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನಲ್ಲಿ ಭವ್ಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನಲ್ಲಿ ಭವ್ಯ ಸ್ವಾಗತ

ಕುವೈತ್‌: ಪ್ರಧಾನಿ ನರೇಂದ್ರ ಮೋದಿಯವರು ಕುವೈಟ್‌ ಗೆ ಪ್ರವಾಸಕ್ಕೆಂದು ತೆರಳಿದ್ದು, ಈ ವೇಳೆ ಅಲ್ಲಿನ ಅಧಿಕಾರಿಗಳು ಮತ್ತು ಭಾರತೀಯ ವಲಸಿಗರು ಅವರನ್ನು ಆದರದಿಂದ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಶುಭಾಶಯಗಳೊಂದಿಗೆ ಪ್ರಧಾನಿಯವರನ್ನು ಬರ ಮಾಡಿಕೊಳ್ಳಲಾಯಿತು.

ಕುವೈತ್ ಸಿಟಿಯ ಹೋಟೆಲ್‌ನಲ್ಲಿ ಭಾರತೀಯ ವಲಸಿಗರೊಂದಿಗೆ ಮೋದಿ ಸಂವಾದ ನಡೆಸಿದರು. ಕಲಾವಿದರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.

ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್ ಅಹ್ಮದ್ ಅಲ್ ಜಬರ್ ಅಲ್ ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ಅವರು ಗಲ್ಫ್ ರಾಷ್ಟ್ರವಾದ ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ. 43 ವರ್ಷಗಳಲ್ಲಿ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ.

ಅವರ ಆಗಮನದ ನಂತರ ಮೋದಿ ಅವರು 101 ವರ್ಷದ ಮಾಜಿ ಐಎಫ್‌ಎಸ್ ಅಧಿಕಾರಿ ಮಂಗಲ್ ಸೈನ್ ಹಂಡಾ ಅವರನ್ನು ಭೇಟಿಯಾದರು.

“ಇದು ಜೀವಮಾನದ ಅನುಭವ. ವಿಶೇಷವಾಗಿ ಮಂಗಲ್ ಸೈನ್ ಹಂಡಾರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು. ನಾವು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ” ಎಂದು ಮಾಜಿ ಐಎಫ್‌ಎಸ್ ಅಧಿಕಾರಿಯ ಪುತ್ರ ದಿಲೀಪ್ ಹಂಡಾ ಹೇಳಿದ್ದಾರೆ.

ಅವರ 100 ನೇ ಹುಟ್ಟುಹಬ್ಬದಂದು ಮಾಜಿ ಐಎಫ್‌ಎಸ್ ಅಧಿಕಾರಿಗೆ ಮೋದಿ ಅಭಿನಂದನಾ ಪತ್ರವನ್ನು ಕಳುಹಿಸಿದ್ದಾರೆ ಎಂದು ಅವರ ಪುತ್ರ ಪ್ರದೀಪ್ ಹಂಡಾ ನೆನಪಿಸಿಕೊಂಡರು.

“ನಾನು ಸುಮಾರು 40 ವರ್ಷಗಳಿಂದ ಕುವೈತ್‌ನಲ್ಲಿದ್ದೇನೆ. ನಾನು ಕುವೈತ್‌ನ ಅತಿದೊಡ್ಡ ಬ್ಯಾಂಕ್‌ಗಳಲ್ಲಿ ಒಂದಾದ ನ್ಯಾಷನಲ್ ಬ್ಯಾಂಕ್ ಆಫ್ ಕುವೈತ್‌ನ ಜನರಲ್ ಮ್ಯಾನೇಜರ್ ಆಗಿದ್ದೇನೆ… ಇದು ತುಂಬಾ ರೋಮಾಂಚನಕಾರಿ ಅನುಭವವಾಗಿದ್ದು, ಪ್ರಧಾನಿ ಮೋದಿ ಅವರು ತಂದೆಯನ್ನು ಭೇಟಿಯಾಗಲು ಬಯಸುತ್ತಿದ್ದಾರೆ ಎಂದು ರಾಯಭಾರಿಯಿಂದ ನನಗೆ ಕರೆ ಬಂದಿದೆ. ನನ್ನ ತಂದೆಯ 100 ನೇ ಹುಟ್ಟುಹಬ್ಬದಂದು ಭೇಟಿ ಮಾಡಿ, ಪ್ರಧಾನಿ ಅಭಿನಂದನೆಗಳ ಪತ್ರವನ್ನು ಕಳುಹಿಸಿದ್ದಾರೆ” ಎಂದು ಅವರು ಹೇಳಿದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories