ಯುಕೆಮಹಿಳೆಯ ಮೇಲೆ ಹಲ್ಲೆ: ಭಾರತ ಮೂಲದ ವ್ಯಕ್ತಿಗೆ ಬ್ರಿಟನ್‌ನಲ್ಲಿ...

ಮಹಿಳೆಯ ಮೇಲೆ ಹಲ್ಲೆ: ಭಾರತ ಮೂಲದ ವ್ಯಕ್ತಿಗೆ ಬ್ರಿಟನ್‌ನಲ್ಲಿ ಜೈಲು ಶಿಕ್ಷೆ

ಲಂಡನ್: ಮಹಿಳೆಯೋರ್ವಳ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಲಂಡನ್‌ನ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

40 ವರ್ಷದ ಮಹಿಳೆಗೆ ತೀವ್ರ ಹಲ್ಲೆ ನಡೆಸಿದ ಆರೋಪದಲ್ಲಿ ಜನವರಿ 29ರಂದು ಭಾರತ ಮೂಲದ ಫರ್ವೇಝ್ ಪಟೇಲ್‌ನನ್ನು ಮೆಟ್ರೊಪಾಲಿಟನ್ ಪೊಲೀಸರು ವೆಸ್ಟ್‌ಮಿನ್‌ಸ್ಟರ್‌ನಲ್ಲಿ ಬಂಧಿಸಿದ್ದರು. ಜನವರಿ 29ರಂದು ಫರ್ವೇಝ್ ಲೈಂಗಿಕ ಕಾರ್ಯಕರ್ತೆಯನ್ನು ಬುಕ್ ಮಾಡಿ ಆಕೆಯ ಮನೆಗೆ ಬಂದಿದ್ದ. ಬಳಿಕೆ ಆಕೆಯ ಮನೆಯಲ್ಲೇ ಮಹಿಳೆಗೆ ತೀವ್ರ ಹಲ್ಲೆ ನಡೆಸಿದ್ದ. ಹಲ್ಲೆಯ ಪರಿಣಾಮ ಮಹಿಳೆಯ ಗಂಭೀರವಾಗಿ ಗಾಯಗೊಂಡಿದ್ದಳು. ಮಹಿಳೆಯ ಆಕ್ರಂದನ ಕೇಳಿದ ನೆರೆಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಫರ್ವೇಝ್‌ನನ್ನು ಬಂಧಿಸಿದ್ದರು.

ಮಹಿಳೆ ತನ್ನ ಸ್ವಂತ ಮನೆಯಲ್ಲೇ ಅಬಲೆಯಾಗಿದ್ದಳು. ಆಕೆಯ ಮೇಲೆ ತೀವ್ರ ತರದ ಗಾಯಗಳಾಗಿದ್ದವು. ಸ್ಥಳೀಯರ ಶೀಘ್ರ ಸ್ಪಂದನೆಯಿಂದಾಗಿ ಆರೋಪಿಯ ಬಂಧನ ಸಾಧ್ಯವಾಯಿತು ಎಂದು ಪೊಲೀಸ್ ಕಾನ್‌ಸ್ಟೇಬಲ್ ಲೋಯ್ಡ್ ಲೀಚ್ ತಿಳಿಸಿದ್ದಾರೆ.

ಲೈಂಗಿಕ ಕಾರ್ಯಕರ್ತರು ಹೆಚ್ಚಿನ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಅವರ ಸುರಕ್ಷತೆಯನ್ನು ನಾವು ಖಾತರಿ ಪಡಿಸುತ್ತೇವೆ. ಇಂತಹ ಸಂದರ್ಭದಲ್ಲಿ ಯಾವುದೇ ಹಿಂಜರಿಕೆ ಇಲ್ಲದೇ ದೂರು ನೀಡಿ. ನಾವು ನಿಮ್ಮ ಬೆಂಬಲಕ್ಕೆ ಇದ್ದೇವೆ ಎಂದು ಲೋಯ್ಡ್ ಲೀಚ್ ಹೇಳಿದ್ದಾರೆ.

ಪಟೇಲ್ ವಿರುದ್ಧ ಜನವರಿ 30ರಂದು ದೋಷಾರೋಪ ಸಲ್ಲಿಸಲಾಗಿತ್ತು. ಲಂಡನ್‌ನ ಸೌತ್‌ವಾರ್ಕ್ ಕ್ರೌನ್ ಕೋರ್ಟ್‌ನಲ್ಲಿ ಕಳೆದ 3 ವಾರಗಳಲ್ಲಿ ನಡೆದ ವಿಚಾರಣೆಯಲ್ಲಿ ಅಪರಾಧ ಸಾಬೀತಾಗಿದ್ದು, 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸ್ ಕಾನ್‌ಸ್ಟೇಬಲ್ ಪ್ರೀತ್ ಬ್ರಾರ್ ತಿಳಿಸಿದ್ದಾರೆ.

Hot this week

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಸಂದ ಗೌರವ, ಅಮೇರಿಕದ ತುಳುವರಲ್ಲಿ ಸಂಭ್ರಮ!

ಅಮೇರಿಕ: ತುಳುನಾಡಿನ ಜನರ ಬಹುದಶಕಗಳ ಕನಸು ನನಸಾಗಿದೆ. ಸೆಪ್ಟೆಂಬರ್ 18, 2026ರಂದು...

ನ್ಯೂಯಾರ್ಕ್‌ನ ಆಲ್ಬನಿಯ ಸುಪ್ರಿಯಾ ಶೆಟ್ಟಿಗೆ ‘ಮಿಸ್ಸೆಸ್ ಅಕ್ಕ- 2026’ ಕಿರೀಟ

ಫಿಲಡೆಲ್ಫಿಯಾ: ಫಿಲಡೆಲ್ಫಿಯಾದಲ್ಲಿ ನಡೆದ ಅಕ್ಕ (AKKA) ರಜತ ಮಹೋತ್ಸವ ವಿಶ್ವ ಕನ್ನಡ...

ದುಬೈಯಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ; ಭಕ್ತಿ,ಸಂಸ್ಕೃತಿ ಹಾಗೂ ಸಮುದಾಯದ ಒಗ್ಗಟ್ಟಿಗೆ ಸಾಕ್ಷಿಯಾದ ಕಾರ್ಯಕ್ರಮ

ದುಬೈ, : ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ,...

ಬೆಂಗಳೂರು; ಕನ್ನಡಿಗರ ಕೂಟ, ದುಬೈಯಿಂದ ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪರಿಗೆ ಪ್ರತಿಷ್ಠಿತ ‘ಹುಟ್ಟೂರ ಸನ್ಮಾನ‌’ ಪ್ರದಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಬೆಂಗಳೂರಿನಲ್ಲಿ ನಡೆದ “ಹುಟ್ಟುೂರ ಸನ್ಮಾನ”...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

Related Articles

Popular Categories