ಇತರೆಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ...

ಇಟಲಿ; ಡಾ.ಆರತಿ ಕೃಷ್ಣರೊಂದಿಗೆ ಟುರಿನ್‌ನ ಉಪ ಮೇಯರ್​ರನ್ನು ಭೇಟಿಯಾದ ಹೇಮೇಗೌಡ-ಇರ್ಷತ್: ಕರ್ನಾಟಕ- ಇಟಲಿ ಬಗ್ಗೆ ಚರ್ಚೆ

ಇಟಲಿ: ಯುರೋಪ್‌ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಪರಿಷತ್‌ ಸದಸ್ಯೆ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇಟಲಿ ಕನ್ನಡ ಸಂಘದ ಅಧ್ಯಕ್ಷ ಹೇಮೇಗೌಡ ಮತ್ತು ಐಒಸಿ ಯುರೋಪ್‌ನ ಕಾರ್ಯದರ್ಶಿ ಇರ್ಷತ್ ಅವರೊಂದಿಗೆ ಟುರಿನ್‌ನ ಉಪ ಮೇಯರ್ ಮೈಕೆಲಾ ಫವಾರೊ ಅವರನ್ನು ಭೇಟಿಯಾಗಿ ಕರ್ನಾಟಕ- ಇಟಲಿಯ ಸಂಬಂಧಗಳ ಪ್ರಮುಖ ಅಂಶಗಳನ್ನು ಚರ್ಚಿಸಿದರು.

ಇಟಲಿಯಲ್ಲಿ ಭಾರತೀಯ ಶುಶ್ರೂಶಕರ ನೇಮಕಾತಿಗೆ ಅವಕಾಶಗಳು, ಭಾರತೀಯ ವಿದ್ಯಾರ್ಥಿಗಳಿಗೆ ಯುರೋಪಿಯನ್- ಇಟಾಲಿಯನ್ ಭಾಷಾ ತರಬೇತಿ ಕಾರ್ಯಕ್ರಮಗಳು ಮತ್ತು ಎರಡೂ ದೇಶಗಳ ನಡುವಿನ ಶೈಕ್ಷಣಿಕ ಮತ್ತು ವೃತ್ತಿಪರ ಸಹಯೋಗಕ್ಕಾಗಿ ವಿಶಾಲ ಮಾರ್ಗಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾಡೆರಾಟಿ ಕೌನ್ಸಿಲ್ ಅಧ್ಯಕ್ಷ ಸಿಮೋನ್ ಫಿಸ್ಸೊಲೊ, ಮಾರಿಯಾ ಬೊಟೊಗ್ಲಿಯೇರಿ ಮತ್ತು ಫ್ರಾನ್ಸೆಸ್ಕೊ ಟೋರ್ಟೊರೆಲ್ಲಾ ಕೂಡ ಭಾಗವಹಿಸಿದ್ದರು.

Hot this week

ಯುಎಇಯ ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಅಧ್ಯಕ್ಷರಾಗಿ...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17)...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Related Articles

Popular Categories