ಯುಎಇಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ 'ಕನ್ನಡ ಪಾಠ ಶಾಲೆ...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಅವರು ಮಂಗಳವಾರ ಐಪಿಎಫ್ ಮತ್ತು ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕನ್ನಡ ಪಾಠ ಶಾಲೆ ದುಬೈ’ನ ಮಾತೃಭಾಷಾ ಸೇವೆಯನ್ನು ಮೆಚ್ಚಿ ಅಭಿನಂದಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದುಬೈ ಕನ್ನಡ ಪಾಠ ಶಾಲೆಯು ಮಾತೃಭಾಷಾ ಪೋಷಣೆಗೆ ಒಂದು ಜಾಗತಿಕ ಮಾದರಿ ಎಂದು ಪ್ರಶಂಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ್ ಜೋಶಿಯವರು ಭಾರತ ಸರ್ಕಾರದ ಪರವಾಗಿ ಕನ್ನಡ ಪಾಠ ಶಾಲೆಯ ಸ್ಥಾಪಕ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಅವರನ್ನು ಸನ್ಮಾನಿಸಿ, ಕಾರ್ಯಕಾರಿ ಸಮಿತಿಯನ್ನು, ಶಿಕ್ಷಕಿಯರು ಮತ್ತು ಸ್ವಯಂಸೇವಕರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಸತೀಶ್ ಕುಮಾರ್ ಸಿವನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುರಸ್ಕಾರದ ಅಭಿನಂದನೆ ಸ್ವೀಕರಿಸಿದ ಶಾಲೆಯ ಸಂಚಾಲಕಿ ಮತ್ತು ಮುಖ್ಯ ಶಿಕ್ಷಕಿ ರೂಪ ಹೆಚ್.ಜಿ., ಉಪಾಧ್ಯಕ್ಷ ಸಿದ್ದಲಿಂಗೇಶ್, ಕಾರ್ಯದರ್ಶಿ ಸುನೀಲ್ ಕವಾಸ್ಕರ್, ಜಂಟಿ ಕಾರ್ಯದರ್ಶಿ ಶಶಿಧರ್ ಮುಂಡರಗಿ, ಖಜಾಂಚಿ ನಾಗರಾಜ್ ರಾವ್, ಗೌರವ ಪೋಷಕರಾದ ಪ್ರವೀಣ್ ಶೆಟ್ಟಿ, ಮೋಹನ್ ನರಸಿಂಹಸಮೂರ್ತಿ, ಸಲಹೆಗಾರ ಎಂ.ಇ.ಮೂಳೂರು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories