ಯುಎಇಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ 'ಕನ್ನಡ ಪಾಠ ಶಾಲೆ...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಅವರು ಮಂಗಳವಾರ ಐಪಿಎಫ್ ಮತ್ತು ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕನ್ನಡ ಪಾಠ ಶಾಲೆ ದುಬೈ’ನ ಮಾತೃಭಾಷಾ ಸೇವೆಯನ್ನು ಮೆಚ್ಚಿ ಅಭಿನಂದಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದುಬೈ ಕನ್ನಡ ಪಾಠ ಶಾಲೆಯು ಮಾತೃಭಾಷಾ ಪೋಷಣೆಗೆ ಒಂದು ಜಾಗತಿಕ ಮಾದರಿ ಎಂದು ಪ್ರಶಂಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ್ ಜೋಶಿಯವರು ಭಾರತ ಸರ್ಕಾರದ ಪರವಾಗಿ ಕನ್ನಡ ಪಾಠ ಶಾಲೆಯ ಸ್ಥಾಪಕ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಅವರನ್ನು ಸನ್ಮಾನಿಸಿ, ಕಾರ್ಯಕಾರಿ ಸಮಿತಿಯನ್ನು, ಶಿಕ್ಷಕಿಯರು ಮತ್ತು ಸ್ವಯಂಸೇವಕರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಸತೀಶ್ ಕುಮಾರ್ ಸಿವನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುರಸ್ಕಾರದ ಅಭಿನಂದನೆ ಸ್ವೀಕರಿಸಿದ ಶಾಲೆಯ ಸಂಚಾಲಕಿ ಮತ್ತು ಮುಖ್ಯ ಶಿಕ್ಷಕಿ ರೂಪ ಹೆಚ್.ಜಿ., ಉಪಾಧ್ಯಕ್ಷ ಸಿದ್ದಲಿಂಗೇಶ್, ಕಾರ್ಯದರ್ಶಿ ಸುನೀಲ್ ಕವಾಸ್ಕರ್, ಜಂಟಿ ಕಾರ್ಯದರ್ಶಿ ಶಶಿಧರ್ ಮುಂಡರಗಿ, ಖಜಾಂಚಿ ನಾಗರಾಜ್ ರಾವ್, ಗೌರವ ಪೋಷಕರಾದ ಪ್ರವೀಣ್ ಶೆಟ್ಟಿ, ಮೋಹನ್ ನರಸಿಂಹಸಮೂರ್ತಿ, ಸಲಹೆಗಾರ ಎಂ.ಇ.ಮೂಳೂರು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Hot this week

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

ಅಮೇರಿಕ; ಉತ್ತರ ಕೆರೊಲಿನಾದಲ್ಲಿ 48ನೇ ವಿಎಸ್‌ಎನ್‌ಎ ಮಹಾಸಮ್ಮೇಳನಕ್ಕೆ ಅದ್ದೂರಿ ಚಾಲನೆ

-ಬೆಂಕಿ ಬಸಣ್ಣ, ಉತ್ತರ ಕೆರೊಲಿನಾ ಉತ್ತರ ಅಮೇರಿಕದ ವೀರಶೈವ-ಲಿಂಗಾಯತ ಸಮುದಾಯದ ಅತ್ಯಂತ ಹಿರಿಯ...

Related Articles

Popular Categories