ಯುಎಇಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ 'ಕನ್ನಡ ಪಾಠ ಶಾಲೆ...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಅವರು ಮಂಗಳವಾರ ಐಪಿಎಫ್ ಮತ್ತು ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕನ್ನಡ ಪಾಠ ಶಾಲೆ ದುಬೈ’ನ ಮಾತೃಭಾಷಾ ಸೇವೆಯನ್ನು ಮೆಚ್ಚಿ ಅಭಿನಂದಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದುಬೈ ಕನ್ನಡ ಪಾಠ ಶಾಲೆಯು ಮಾತೃಭಾಷಾ ಪೋಷಣೆಗೆ ಒಂದು ಜಾಗತಿಕ ಮಾದರಿ ಎಂದು ಪ್ರಶಂಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಹ್ಲಾದ್ ಜೋಶಿಯವರು ಭಾರತ ಸರ್ಕಾರದ ಪರವಾಗಿ ಕನ್ನಡ ಪಾಠ ಶಾಲೆಯ ಸ್ಥಾಪಕ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಅವರನ್ನು ಸನ್ಮಾನಿಸಿ, ಕಾರ್ಯಕಾರಿ ಸಮಿತಿಯನ್ನು, ಶಿಕ್ಷಕಿಯರು ಮತ್ತು ಸ್ವಯಂಸೇವಕರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದುಬೈ ಭಾರತೀಯ ಕಾನ್ಸುಲೇಟ್ ಜನರಲ್ ಸತೀಶ್ ಕುಮಾರ್ ಸಿವನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುರಸ್ಕಾರದ ಅಭಿನಂದನೆ ಸ್ವೀಕರಿಸಿದ ಶಾಲೆಯ ಸಂಚಾಲಕಿ ಮತ್ತು ಮುಖ್ಯ ಶಿಕ್ಷಕಿ ರೂಪ ಹೆಚ್.ಜಿ., ಉಪಾಧ್ಯಕ್ಷ ಸಿದ್ದಲಿಂಗೇಶ್, ಕಾರ್ಯದರ್ಶಿ ಸುನೀಲ್ ಕವಾಸ್ಕರ್, ಜಂಟಿ ಕಾರ್ಯದರ್ಶಿ ಶಶಿಧರ್ ಮುಂಡರಗಿ, ಖಜಾಂಚಿ ನಾಗರಾಜ್ ರಾವ್, ಗೌರವ ಪೋಷಕರಾದ ಪ್ರವೀಣ್ ಶೆಟ್ಟಿ, ಮೋಹನ್ ನರಸಿಂಹಸಮೂರ್ತಿ, ಸಲಹೆಗಾರ ಎಂ.ಇ.ಮೂಳೂರು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories