ಒಮಾನ್ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ 'ಸ್ನೇಹ ಸಂಗಮ' ಕಾರ್ಯಕ್ರಮ

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ ಶುಕ್ರವಾರ ಅತ್ಯಂತ ವರ್ಣರಂಜಿತವಾಗಿ ಸಲಾಲದ ಇತಿನ್ ನ ವಿಲ್ಲಾದಲ್ಲಿ ಜರಗಿತು.

ಕಳೆದ ಮೂರು ತಿಂಗಳಿಂದ ಇಲ್ಲಿನ ಕನ್ನಡಿಗ ಕುಟುಂಬದ ಮಕ್ಕಳಿಗೆ ಕನ್ನಡ ಹಾಗೂ ಮೋರಲ್ ಎಜುಕೇಶನ್ ನೀಡುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷ ಫಾರೂಖ್ ಕನ್ನಂಗಾರ್ ಅವರ ನಿವಾಸದಲ್ಲಿ ಸುಮಾರು ಹತ್ತು ಮಕ್ಕಳಿಂದ ಆರಂಭಿಸಿದ ಸ್ಟಡಿ ಕ್ಲಾಸ್ ಇದೀಗ ಸುಮಾರು ಮೂವತ್ತರಷ್ಟು ಕುಟುಂಬದ 45 ಮಕ್ಕಳಿಗೆ ಕನ್ನಡ ಭಾಷಾವಿದ್ಯೆ ಹಾಗೂ ನೈತಿಕ ಭೋದನೆ ನೀಡುತ್ತಿದೆ.

ಇದರ ಪೋಷಕರನ್ನು ಸೇರಿಸಿ ‘ಸ್ನೇಹ ಸಂಗಮ’ ಹಾಗೂ ಮಕ್ಕಳ ಕನ್ನಡ ಹಾಗೂ ಇಸ್ಲಾಮಿಕ್ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ವರ್ಣರಂಜಿತವಾದ ನಡೆದಿದ್ದು, ಈ ವೇಳೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪುರುಷರ ಹಾಗೂ ಮಹಿಳೆಯರ ಪ್ರತ್ಯೇಕ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ಯುವ ಉದ್ಯಮಿ ಅಶ್ರಫ್ ಕಡಬ, ಇಂಡಿಯಾ ಸ್ಪೋರ್ಟ್ ಕ್ಲಬ್ ಕನ್ನಡ ವಿಭಾಗದದ ಕಾರ್ಯದರ್ಶಿ ಶಖೀಲ್ ಹಾಗೂ ಬ್ಯಾರೀಸ್ ಕಮ್ಯುನಿಟಿಯ ಸಿದ್ದೀಖ್ ತೈಬಾರವರು ಭಾಗವಹಿಸಿ ಶುಭಹಾರೈಸಿದರು.

ಸಮಿತಿಯ ಅಧ್ಯಕ್ಷ ಹಾಗೂ ರುವಾರಿ ಫಾರೂಖ್ ಕನ್ನಂಗಾರ್, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ರಝಾ ಅಂಜದಿ ಪಕ್ಷಿಕೆರೆ, ಉದ್ಯಮಿ ಅಶ್ರಫ್ ಕಡಬರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ನಾಸರ್ ನಂದಾವರ, ಕೋಶಾಧಿಕಾರಿ ಶರೀಫ್ ಕುತ್ತಾರ್, ಕೆಸಿಎಫ್ ಅಧ್ಯಕ್ಷರಾದ ಲತೀಫ್ ಸುಳ್ಯ, ಸಮಿತಿ ಸದಸ್ಯರಾದ ಫೈರೋಝ್ ಕಲ್ಲಡ್ಕ, ಶಂಸುದ್ದೀನ್ ಉಜಿರೆ, ಫಾರೂಖ್ ತುಮ್ರೀತ್, ಸದಕತುಲ್ಲಾ ಕಳಸ, ತಂಮ್ರೀಝ್ ಕೈಕಂಬ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಸ್ವಾಗತ ಸಮಿತಿ ಚೇರ್ಮ್ಯಾನ್ ಲತೀಫ್ ಪುತ್ತೂರು ಮಾಡಿದರು. ಕಾರ್ಯಕ್ರಮದಲ್ಲಿ ನೂರಾರು ಕನ್ನಡಿಗರು ಭಾಗವಹಿಸಿದ್ದರು.

Hot this week

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಸಂದ ಗೌರವ, ಅಮೇರಿಕದ ತುಳುವರಲ್ಲಿ ಸಂಭ್ರಮ!

ಅಮೇರಿಕ: ತುಳುನಾಡಿನ ಜನರ ಬಹುದಶಕಗಳ ಕನಸು ನನಸಾಗಿದೆ. ಸೆಪ್ಟೆಂಬರ್ 18, 2026ರಂದು...

ನ್ಯೂಯಾರ್ಕ್‌ನ ಆಲ್ಬನಿಯ ಸುಪ್ರಿಯಾ ಶೆಟ್ಟಿಗೆ ‘ಮಿಸ್ಸೆಸ್ ಅಕ್ಕ- 2026’ ಕಿರೀಟ

ಫಿಲಡೆಲ್ಫಿಯಾ: ಫಿಲಡೆಲ್ಫಿಯಾದಲ್ಲಿ ನಡೆದ ಅಕ್ಕ (AKKA) ರಜತ ಮಹೋತ್ಸವ ವಿಶ್ವ ಕನ್ನಡ...

ದುಬೈಯಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ; ಭಕ್ತಿ,ಸಂಸ್ಕೃತಿ ಹಾಗೂ ಸಮುದಾಯದ ಒಗ್ಗಟ್ಟಿಗೆ ಸಾಕ್ಷಿಯಾದ ಕಾರ್ಯಕ್ರಮ

ದುಬೈ, : ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ,...

ಬೆಂಗಳೂರು; ಕನ್ನಡಿಗರ ಕೂಟ, ದುಬೈಯಿಂದ ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪರಿಗೆ ಪ್ರತಿಷ್ಠಿತ ‘ಹುಟ್ಟೂರ ಸನ್ಮಾನ‌’ ಪ್ರದಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ವತಿಯಿಂದ ಬೆಂಗಳೂರಿನಲ್ಲಿ ನಡೆದ “ಹುಟ್ಟುೂರ ಸನ್ಮಾನ”...

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

Related Articles

Popular Categories