ಯುಎಇಕರ್ನಾಟಕ ಬಜೆಟ್-2026; 'ಪ್ರತ್ಯೇಕ ಸಚಿವಾಲಯ' ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರಿಂದ...

ಕರ್ನಾಟಕ ಬಜೆಟ್-2026; ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರಿಂದ ಆಕ್ರೋಶ; ಕೂಡಲೇ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವಂತೆ ಡಾ.ರೋನಾಲ್ಡ್ ಕೊಲಾಸೊ ಒತ್ತಾಯ

ದುಬೈ: ಈ ಬಾರಿಯ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರಿಗೆ ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯ ಕುರಿತು ಘೋಷಣೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಅನಿವಾಸಿ ಕನ್ನಡಿಗರಿಗೆ ನಿರಾಸೆಯಾಗಿದೆ.

ಡಿಸೆಂಬರ್ 11ರಂದು ಬೆಳಗಾವಿ ಅಧಿವೇಶನದ ವೇಳೆ ಖ್ಯಾತ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗು ಗೃಹಸಚಿವರ ದ.ಜಿ.ಪರಮೇಶ್ವರ್ ಭೇಟಿಯಾದ ಸುಮಾರು ಹತ್ತಕ್ಕೂ ಹೆಚ್ಚು ದೇಶಗಳ 45 ಮಂದಿ ಕನ್ನಡಿಗ ಪ್ರತಿನಿಧಿಗಳ NRI ನಿಯೋಗವು ‘ಪ್ರತ್ಯೇಕ ಸಚಿವಾಲಯ’ಕ್ಕಾಗಿ ಒತ್ತಾಯಿಸಿತ್ತು. ಈ ವೇಳೆ ಶೀಘ್ರವೇ ‘ಪ್ರತ್ಯೇಕ ಸಚಿವಾಲಯ’ವನ್ನು ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವ ಕುಮಾರ್ ಭರವಸೆ ನೀಡಿದ್ದರು.

ಆದರೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆಯಾಗಲಿ, ಉಲ್ಲೇಖವಾಗಲಿ ವ್ಯಕ್ತಪಡಿಸದಿರುವುದು ಅನಿವಾಸಿ ಕನ್ನಡಿಗರಿಗೆ ಬೇಸರ ತಂದಿದೆ.

ಈ ಹಿಂದೆ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೋಗಿದ್ದ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ಅವರು ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಘೋಷಣೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ, ಆದರೆ ನಮ್ಮ ನಿರೀಕ್ಷೆಯನ್ನು ಕರ್ನಾಟಕ ಸರಕಾರ ಹುಸಿ ಮಾಡಿದೆ ಎಂದಿದ್ದಾರೆ.

ಕೇರಳ ಸರಕಾರ ಅಲ್ಲಿನ ಅನಿವಾಸಿಗರಿಗಾಗಿ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವ ಮೂಲಕ ಅವರ ಹಿತಕಾಯುತ್ತಿದೆ. ಅನಿವಾಸಿ ಕೇರಳಿಗರ ಕಷ್ಟ, ನೋವುಗಳಿಗೆ ವೇದಿಕೆಯನ್ನು ಒದಗಿಸಿ ಕೊಟ್ಟಿದೆ. ಅದೇ ರೀತಿ ಅನಿವಾಸಿ ಕನ್ನಡಿಗರ ಕಷ್ಟ, ನಷ್ಟಗಳಿಗೆ ಧ್ವನಿಯಾಗಲು ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವಂತೆ ನಾವು ಮನವಿಯನ್ನು ಕೊಟ್ಟು ಒತ್ತಾಯಿಸಿದ್ದೆವು. ಆದರೆ ರಾಜ್ಯ ಸರಕಾರ ನಮ್ಮ ಬಹುಕಾಲದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಬೇಸರವನ್ನು ತೋಡಿಕೊಂಡಿದ್ದಾರೆ.

‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯಿಂದ ಕೇವಲ ಅನಿವಾಸಿ ಕನ್ನಡಿಗರಿಗೆ ಮಾತ್ರ ಪ್ರಯೋಜನ, ಲಾಭ ಅಗುದಲ್ಲ. ಬದಲಾಗಿ ಕರ್ನಾಟಕ ರಾಜ್ಯಕ್ಕೂ ಇದರಿಂದ ಬಹಳಷ್ಟು ಲಾಭ, ಪ್ರಯೋಜನ ಸಿಗಲಿದೆ ಎಂಬುದನ್ನು ಸರಕಾರ ಅರ್ಥ ಮಾಡಿಕೊಳ್ಳಲಿ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ‘ಪ್ರತ್ಯೇಕ ಸಚಿವಾಲಯ’ವನ್ನು ಘೋಷಣೆ ಮಾಡುವ ಮೂಲಕ ಅನಿವಾಸಿ ಕನ್ನಡಿಗರ ಬಹುಮುಖ್ಯ ಬೇಡಿಕೆಗೆ ಸ್ಪಂದಿಸಬೇಕು ಎಂದು ಡಾ.ರೋನಾಲ್ಡ್ ಕೊಲಾಸೊ ಒತ್ತಾಯಿಸಿದ್ದಾರೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories