ಯುಎಇಕರ್ನಾಟಕ ಬಜೆಟ್-2026; 'ಪ್ರತ್ಯೇಕ ಸಚಿವಾಲಯ' ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರಿಂದ...

ಕರ್ನಾಟಕ ಬಜೆಟ್-2026; ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರಿಂದ ಆಕ್ರೋಶ; ಕೂಡಲೇ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವಂತೆ ಡಾ.ರೋನಾಲ್ಡ್ ಕೊಲಾಸೊ ಒತ್ತಾಯ

ದುಬೈ: ಈ ಬಾರಿಯ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದಕ್ಕೆ ಅನಿವಾಸಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರಿಗೆ ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯ ಕುರಿತು ಘೋಷಣೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಅನಿವಾಸಿ ಕನ್ನಡಿಗರಿಗೆ ನಿರಾಸೆಯಾಗಿದೆ.

ಡಿಸೆಂಬರ್ 11ರಂದು ಬೆಳಗಾವಿ ಅಧಿವೇಶನದ ವೇಳೆ ಖ್ಯಾತ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗು ಗೃಹಸಚಿವರ ದ.ಜಿ.ಪರಮೇಶ್ವರ್ ಭೇಟಿಯಾದ ಸುಮಾರು ಹತ್ತಕ್ಕೂ ಹೆಚ್ಚು ದೇಶಗಳ 45 ಮಂದಿ ಕನ್ನಡಿಗ ಪ್ರತಿನಿಧಿಗಳ NRI ನಿಯೋಗವು ‘ಪ್ರತ್ಯೇಕ ಸಚಿವಾಲಯ’ಕ್ಕಾಗಿ ಒತ್ತಾಯಿಸಿತ್ತು. ಈ ವೇಳೆ ಶೀಘ್ರವೇ ‘ಪ್ರತ್ಯೇಕ ಸಚಿವಾಲಯ’ವನ್ನು ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವ ಕುಮಾರ್ ಭರವಸೆ ನೀಡಿದ್ದರು.

ಆದರೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆಯಾಗಲಿ, ಉಲ್ಲೇಖವಾಗಲಿ ವ್ಯಕ್ತಪಡಿಸದಿರುವುದು ಅನಿವಾಸಿ ಕನ್ನಡಿಗರಿಗೆ ಬೇಸರ ತಂದಿದೆ.

ಈ ಹಿಂದೆ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೋಗಿದ್ದ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ಅವರು ಬೇಸರ ವ್ಯಕ್ತಪಡಿಸಿದ್ದು, ಈ ಬಾರಿ ಘೋಷಣೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ, ಆದರೆ ನಮ್ಮ ನಿರೀಕ್ಷೆಯನ್ನು ಕರ್ನಾಟಕ ಸರಕಾರ ಹುಸಿ ಮಾಡಿದೆ ಎಂದಿದ್ದಾರೆ.

ಕೇರಳ ಸರಕಾರ ಅಲ್ಲಿನ ಅನಿವಾಸಿಗರಿಗಾಗಿ ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವ ಮೂಲಕ ಅವರ ಹಿತಕಾಯುತ್ತಿದೆ. ಅನಿವಾಸಿ ಕೇರಳಿಗರ ಕಷ್ಟ, ನೋವುಗಳಿಗೆ ವೇದಿಕೆಯನ್ನು ಒದಗಿಸಿ ಕೊಟ್ಟಿದೆ. ಅದೇ ರೀತಿ ಅನಿವಾಸಿ ಕನ್ನಡಿಗರ ಕಷ್ಟ, ನಷ್ಟಗಳಿಗೆ ಧ್ವನಿಯಾಗಲು ‘ಪ್ರತ್ಯೇಕ ಸಚಿವಾಲಯ’ ಸ್ಥಾಪಿಸುವಂತೆ ನಾವು ಮನವಿಯನ್ನು ಕೊಟ್ಟು ಒತ್ತಾಯಿಸಿದ್ದೆವು. ಆದರೆ ರಾಜ್ಯ ಸರಕಾರ ನಮ್ಮ ಬಹುಕಾಲದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಬೇಸರವನ್ನು ತೋಡಿಕೊಂಡಿದ್ದಾರೆ.

‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆಯಿಂದ ಕೇವಲ ಅನಿವಾಸಿ ಕನ್ನಡಿಗರಿಗೆ ಮಾತ್ರ ಪ್ರಯೋಜನ, ಲಾಭ ಅಗುದಲ್ಲ. ಬದಲಾಗಿ ಕರ್ನಾಟಕ ರಾಜ್ಯಕ್ಕೂ ಇದರಿಂದ ಬಹಳಷ್ಟು ಲಾಭ, ಪ್ರಯೋಜನ ಸಿಗಲಿದೆ ಎಂಬುದನ್ನು ಸರಕಾರ ಅರ್ಥ ಮಾಡಿಕೊಳ್ಳಲಿ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ‘ಪ್ರತ್ಯೇಕ ಸಚಿವಾಲಯ’ವನ್ನು ಘೋಷಣೆ ಮಾಡುವ ಮೂಲಕ ಅನಿವಾಸಿ ಕನ್ನಡಿಗರ ಬಹುಮುಖ್ಯ ಬೇಡಿಕೆಗೆ ಸ್ಪಂದಿಸಬೇಕು ಎಂದು ಡಾ.ರೋನಾಲ್ಡ್ ಕೊಲಾಸೊ ಒತ್ತಾಯಿಸಿದ್ದಾರೆ.

Hot this week

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

Related Articles

Popular Categories