ಯುಎಇನ.8ರಂದು ದುಬೈಯಲ್ಲಿ 'ಕನ್ನಡಿಗರ ಕೂಟ-ಗಲ್ಫ್ ಕನ್ನಡ ಮೂವೀಸ್'ನಿಂದ 'ಕರ್ನಾಟಕ...

ನ.8ರಂದು ದುಬೈಯಲ್ಲಿ ‘ಕನ್ನಡಿಗರ ಕೂಟ-ಗಲ್ಫ್ ಕನ್ನಡ ಮೂವೀಸ್’ನಿಂದ ‘ಕರ್ನಾಟಕ ರಾಜ್ಯೋತ್ಸವ’; ಡಾ.ಆರತಿ ಕೃಷ್ಣ ಸ್ವಾಗತಕ್ಕೆ ಸಿದ್ಧತೆ: ಡಾ.ರೊನಾಲ್ಡ್ ಕೊಲಾಸೊ, ಶಿವರಾಜ್ ಕುಮಾರ್, ರಮ್ಯಾಗೆ ಪ್ರಶಸ್ತಿ

ದುಬೈ: ಕನ್ನಡಿಗರ ಕನ್ನಡ ಕೂಟ ದುಬೈ ಯುಎಇ ಮತ್ತು ಗಲ್ಫ್ ಕನ್ನಡ ಮೂವೀಸ್ ಜಂಟಿಯಾಗಿ ಆಯೋಜಿಸಿರುವ “ಕರ್ನಾಟಕ ರಾಜ್ಯೋತ್ಸವ -2025” ಕಾರ್ಯಕ್ರಮವು ನವೆಂಬರ್ 8ರಂದು ಸಂಜೆ 4.30ರಿಂದ ದುಬೈಯ ಕಿಸೀಸ್ ನ ಜೆಮ್ಸ್ ಕೇಂಬ್ರಿಜ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ, ವಿಧಾನ ಪರಿಷತ್ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಡಾ.ಆರತಿ ಕೃಷ್ಣ ಅವರು ಭಾಗವಹಿಸಲಿದ್ದು, ಇದು ಅವರ ಯುಎಇಯ ಮೊದಲ ಭೇಟಿಯಾಗಿದೆ. ಜೊತೆಗೆ ಡಾ.ಆರತಿ ಕೃಷ್ಣ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ವೇದಿಕೆ ಕೂಡ ಕಲ್ಪಿಸಲಾಗಿದೆ.

ಸಂಜೆ 4.30ರಿಂದ ರಾತ್ರಿಯ ವರೆಗೆ ಜರುಗುವ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು Zee ಕನ್ನಡ ಕಾಮಿಡಿ ಕಿಲಾಡಿಗಳು ತಂಡದವರಿಂದ ಹಾಸ್ಯ ಮನೋರಂಜನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಲಿರುವ ಕನ್ನಡಚಿತ್ರರಂಗದ ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರಿಗೆ “ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ-2025”, ಖ್ಯಾತ ಚಲನಚಿತ್ರ ನಟಿ ರಮ್ಯಾ ಅವರಿಗೆ “ಕನ್ನಡದ ಕಣ್ಮಣಿ ಪ್ರಶಸ್ತಿ -2025” ಹಾಗು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊರವರಿಗೆ “ಅಂತಾರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ -2025″ನ್ನು ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories