ಯುಎಇದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ;...

ದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ; ಜಾಗತಿಕ ವ್ಯಾಪಾರ ವೇದಿಕೆ ಅನಾವರಣ: ಯು.ಟಿ.ಖಾದರ್​ಗೆ ಆಮಂತ್ರಣ

ದುಬೈ: ಕರ್ನಾಟಕ ಸಂಘ ದುಬೈ ಆಯೋಜನೆಯ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಾಗತಿಕ ವ್ಯಾಪಾರ ವೇದಿಕೆ ಅನಾವರಣ ದುಬೈನಲ್ಲಿ ನವೆಂಬರ್ 9ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಸಂಘದ ಅಧ್ಯಕ್ಷರಾದ ಶಶಿಧರ್ ನಾಗರಾಜಪ್ಪ ಮತ್ತು ಅವರ ಕಾರ್ಯಕಾರಿ ಸಮಿತಿಯ ದಯಾ ಕಿರೋಡಿಯನ್, ರೊನಾಲ್ಡ್ ಮಾರ್ಟಿಸ್, ಮಲ್ಲಿಕಾರ್ಜುನ ಗೌಡ, ಹಿದಾಯತ್ ಅಡ್ಡೂರು, ನಾಗರಾಜ್ ರಾವ್ ಮತ್ತು ಮನೋಹರ್ ಹೆಗ್ಡೆ ಆಮಂತ್ರಣ ನೀಡಿದರು.

ಆಮಂತ್ರಣವನ್ನು ಸ್ವೀಕರಿಸಿದ ಖಾದರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು. 70ನೇ ದುಬೈ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಅನಿವಾಸಿ ಕನ್ನಡಿಗರಿಗಾಗಿ ಹಲವು ವೇದಿಕೆಗಳಲ್ಲಿ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವ್ಯಾಪಾರ ಸೇತು ವಿಭಾಗದಿಂದ ಕರ್ನಾಟಕದ ಉದ್ದಿಮೆಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಅನ್ವೇಷಿಸುವ ಅವಕಾಶವನ್ನು “ಜಾಗತಿಕ ವ್ಯಾಪಾರ ವೇದಿಕೆ” ಅನಾವರಣ ಮಾಡುವುದರ ಮೂಲಕ ಕಲ್ಪಿಸಿಕೊಡಲಾಗುವುದು. ಕರ್ನಾಟಕದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಈ ವೇದಿಕೆಯಲ್ಲಿ ತಮ್ಮ ಸರಕು ಮತ್ತು ಸೇವೆಗಳನ್ನು ಅಂತಾರಾಷ್ಟ್ರೀಯ ಗ್ರಾಹಕರು ಹಾಗೂ ವ್ಯಾಪಾರಿಗಳಿಗೆ ಪರಿಚಯಿಸಿ ತಮ್ಮ ವ್ಯಾಪಾರವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಬಹುದಾಗಿದೆ ಎಂದು ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾಗಿರುವ ಶಶಿಧರ್ ನಾಗರಾಜಪ್ಪ ತಿಳಿಸಿದ್ದಾರೆ.

Hot this week

Kuwait: KCWA’s annual family picnic draws over 600 attendees at Mishref Garden

Kuwait: The Kuwait Canara Welfare Association (KCWA) organised its...

ಖತರ್‌ನಲ್ಲಿ ಕರಾವಳಿ ಕನ್ನಡಿಗನ ಸಾಧನೆ; ಅಂಡರ್ 19 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆ

ದೋಹಾ: ಕರ್ನಾಟಕದ ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್, ಖತರ್ ಅಂಡರ್...

ರೊನಾಲ್ಡ್ ಮಾರ್ಟಿಸ್​ಗೆ ಶಾರ್ಜಾ ಕರ್ನಾಟಕ ಸಂಘದಿಂದ ‘ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ದುಬೈ: ದುಬೈನಲ್ಲಿ ಇರುವ ಕನ್ನಡ ಪರ ಸಂಘಟನೆಗಳಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಮಾಡುವುದರಲ್ಲಿ...

ಖತರ್‌ನಲ್ಲಿ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ: ಗಲ್ಫ್ ನಾಡಿನಲ್ಲಿ ಗಂಧದ ನಾಡಿನ ವೈಭವ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ...

ದುಬೈ: ಕನ್ನಡಿಗರ ಕೂಟದಿಂದ ʼಕನ್ನಡ ರಾಜ್ಯೋತ್ಸವ 2025ʼ ಭವ್ಯ ಸಂಭ್ರಮ

ದುಬೈ: ಕನ್ನಡಿಗರ ಕೂಟ – ದುಬೈ ಮತ್ತು ಗಲ್ಫ್ ಕನ್ನಡ ಮೂವೀಸ್...

Related Articles

Popular Categories