ಯುಎಇದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ;...

ದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ; ಜಾಗತಿಕ ವ್ಯಾಪಾರ ವೇದಿಕೆ ಅನಾವರಣ: ಯು.ಟಿ.ಖಾದರ್​ಗೆ ಆಮಂತ್ರಣ

ದುಬೈ: ಕರ್ನಾಟಕ ಸಂಘ ದುಬೈ ಆಯೋಜನೆಯ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಾಗತಿಕ ವ್ಯಾಪಾರ ವೇದಿಕೆ ಅನಾವರಣ ದುಬೈನಲ್ಲಿ ನವೆಂಬರ್ 9ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಸಂಘದ ಅಧ್ಯಕ್ಷರಾದ ಶಶಿಧರ್ ನಾಗರಾಜಪ್ಪ ಮತ್ತು ಅವರ ಕಾರ್ಯಕಾರಿ ಸಮಿತಿಯ ದಯಾ ಕಿರೋಡಿಯನ್, ರೊನಾಲ್ಡ್ ಮಾರ್ಟಿಸ್, ಮಲ್ಲಿಕಾರ್ಜುನ ಗೌಡ, ಹಿದಾಯತ್ ಅಡ್ಡೂರು, ನಾಗರಾಜ್ ರಾವ್ ಮತ್ತು ಮನೋಹರ್ ಹೆಗ್ಡೆ ಆಮಂತ್ರಣ ನೀಡಿದರು.

ಆಮಂತ್ರಣವನ್ನು ಸ್ವೀಕರಿಸಿದ ಖಾದರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು. 70ನೇ ದುಬೈ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಅನಿವಾಸಿ ಕನ್ನಡಿಗರಿಗಾಗಿ ಹಲವು ವೇದಿಕೆಗಳಲ್ಲಿ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವ್ಯಾಪಾರ ಸೇತು ವಿಭಾಗದಿಂದ ಕರ್ನಾಟಕದ ಉದ್ದಿಮೆಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಅನ್ವೇಷಿಸುವ ಅವಕಾಶವನ್ನು “ಜಾಗತಿಕ ವ್ಯಾಪಾರ ವೇದಿಕೆ” ಅನಾವರಣ ಮಾಡುವುದರ ಮೂಲಕ ಕಲ್ಪಿಸಿಕೊಡಲಾಗುವುದು. ಕರ್ನಾಟಕದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಈ ವೇದಿಕೆಯಲ್ಲಿ ತಮ್ಮ ಸರಕು ಮತ್ತು ಸೇವೆಗಳನ್ನು ಅಂತಾರಾಷ್ಟ್ರೀಯ ಗ್ರಾಹಕರು ಹಾಗೂ ವ್ಯಾಪಾರಿಗಳಿಗೆ ಪರಿಚಯಿಸಿ ತಮ್ಮ ವ್ಯಾಪಾರವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಬಹುದಾಗಿದೆ ಎಂದು ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾಗಿರುವ ಶಶಿಧರ್ ನಾಗರಾಜಪ್ಪ ತಿಳಿಸಿದ್ದಾರೆ.

Hot this week

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

ದುಬೈಯಲ್ಲಿ ‘ಕುಲಾಲ ಫ್ಯಾಮಿಲಿ’ಯಿಂದ ಯಶಸ್ವಿಯಾಗಿ ನಡೆದ ‘ವಿಹಾರ ಕೂಟ 2025’

ದುಬೈ: 'ಕುಲಾಲ ಫ್ಯಾಮಿಲಿ ದುಬೈ ಯುಎಇ' ವತಿಯಿಂದ ಮಂಗಳವಾರ ದುಬೈಯ ಝಬೀಲ್...

Related Articles

Popular Categories