ಯುಎಇದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ;...

ದುಬೈ ಕರ್ನಾಟಕ ಸಂಘದಿಂದ ನವೆಂಬರ್ 9ರಂದು ಕರ್ನಾಟಕ ರಾಜ್ಯೋತ್ಸವ; ಜಾಗತಿಕ ವ್ಯಾಪಾರ ವೇದಿಕೆ ಅನಾವರಣ: ಯು.ಟಿ.ಖಾದರ್​ಗೆ ಆಮಂತ್ರಣ

ದುಬೈ: ಕರ್ನಾಟಕ ಸಂಘ ದುಬೈ ಆಯೋಜನೆಯ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಾಗತಿಕ ವ್ಯಾಪಾರ ವೇದಿಕೆ ಅನಾವರಣ ದುಬೈನಲ್ಲಿ ನವೆಂಬರ್ 9ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಕರ್ನಾಟಕ ಸರಕಾರದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಸಂಘದ ಅಧ್ಯಕ್ಷರಾದ ಶಶಿಧರ್ ನಾಗರಾಜಪ್ಪ ಮತ್ತು ಅವರ ಕಾರ್ಯಕಾರಿ ಸಮಿತಿಯ ದಯಾ ಕಿರೋಡಿಯನ್, ರೊನಾಲ್ಡ್ ಮಾರ್ಟಿಸ್, ಮಲ್ಲಿಕಾರ್ಜುನ ಗೌಡ, ಹಿದಾಯತ್ ಅಡ್ಡೂರು, ನಾಗರಾಜ್ ರಾವ್ ಮತ್ತು ಮನೋಹರ್ ಹೆಗ್ಡೆ ಆಮಂತ್ರಣ ನೀಡಿದರು.

ಆಮಂತ್ರಣವನ್ನು ಸ್ವೀಕರಿಸಿದ ಖಾದರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು. 70ನೇ ದುಬೈ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಅನಿವಾಸಿ ಕನ್ನಡಿಗರಿಗಾಗಿ ಹಲವು ವೇದಿಕೆಗಳಲ್ಲಿ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವ್ಯಾಪಾರ ಸೇತು ವಿಭಾಗದಿಂದ ಕರ್ನಾಟಕದ ಉದ್ದಿಮೆಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಅನ್ವೇಷಿಸುವ ಅವಕಾಶವನ್ನು “ಜಾಗತಿಕ ವ್ಯಾಪಾರ ವೇದಿಕೆ” ಅನಾವರಣ ಮಾಡುವುದರ ಮೂಲಕ ಕಲ್ಪಿಸಿಕೊಡಲಾಗುವುದು. ಕರ್ನಾಟಕದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು ಈ ವೇದಿಕೆಯಲ್ಲಿ ತಮ್ಮ ಸರಕು ಮತ್ತು ಸೇವೆಗಳನ್ನು ಅಂತಾರಾಷ್ಟ್ರೀಯ ಗ್ರಾಹಕರು ಹಾಗೂ ವ್ಯಾಪಾರಿಗಳಿಗೆ ಪರಿಚಯಿಸಿ ತಮ್ಮ ವ್ಯಾಪಾರವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಬಹುದಾಗಿದೆ ಎಂದು ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾಗಿರುವ ಶಶಿಧರ್ ನಾಗರಾಜಪ್ಪ ತಿಳಿಸಿದ್ದಾರೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories