Lead Newsದುಬೈಯಲ್ಲಿ 'ಕುಲಾಲ ಫ್ಯಾಮಿಲಿ'ಯಿಂದ ಯಶಸ್ವಿಯಾಗಿ ನಡೆದ 'ವಿಹಾರ ಕೂಟ...

ದುಬೈಯಲ್ಲಿ ‘ಕುಲಾಲ ಫ್ಯಾಮಿಲಿ’ಯಿಂದ ಯಶಸ್ವಿಯಾಗಿ ನಡೆದ ‘ವಿಹಾರ ಕೂಟ 2025’

ದುಬೈ: ‘ಕುಲಾಲ ಫ್ಯಾಮಿಲಿ ದುಬೈ ಯುಎಇ’ ವತಿಯಿಂದ ಮಂಗಳವಾರ ದುಬೈಯ ಝಬೀಲ್ ಪಾರ್ಕಿನಲ್ಲಿ ಆಯೋಜಿಸಲಾಗಿದ್ದ ‘ವಿಹಾರ ಕೂಟ 2025’ ಯಶಸ್ವಿಯಾಗಿ ನಡೆಯಿತು.

ಸುಮಾರು 130ಕ್ಕೂ ಅಧಿಕ ಸಂಖ್ಯೆಯಲ್ಲಿ ಕುಲಾಲ ಸಮುದಾಯದ ಭಾಂದವರು ಪಾಲುಗೊಂದು ಸಂಭ್ರಮಿಸಿದರು. ಬೆಳಗ್ಗೆ 9 ಗಂಟೆಗೆ ಉಪಹಾರದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಕುಮಾರಿ ದೇಶ್ನ ಪ್ರವೀಣ್ ಕುಲಾಲ್ ಹಾಗೂ ಧನ್ವಿ ಸಚಿನ್ ಕುಲಾಲ್ ಪ್ರಾರ್ಥನೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದುಬೈಯಲ್ಲಿ ಹಲವು ವರುಷಗಳಿಂದ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದುಕೊಂಡು ಹಿರಿಯರು ಹಾಗೂ ಮಾರ್ಗದರ್ಶಕರಾಗಿರುವ ಪದ್ಮನಾಭ ಕುಲಾಲ್ ಎಕ್ಕಾರು ಕಾರ್ಯಕ್ರಮಕ್ಕೆ ಶುಭಹಾರೈಸಿ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮಕ್ಕಳಿಗೆ ಹಾಗೂ ದೊಡ್ಡವರಿಗಾಗಿ ವಿವಿಧ ಮೋಜಿನ ಕ್ರೀಡಾ ಸ್ಪರ್ಧೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ಮಧ್ಯಾಹ್ನ ಭೋಜನ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಕೊನೆಯಲ್ಲಿ ವಿವಿಧ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವನ್ನು ನೀಡಲಾಯಿತು. ವಿಹಾರ ಕೂಟದಲ್ಲಿ ಭಾಗವಹಿಸದವರು ತುಂಬಾ ಉತ್ಸಾಹದಿಂದ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡರು. ಅಕ್ಷಯ ಕುಲಾಲ್, ಮುಖೇಶ್ ಕುಲಾಲ್, ಆನಂದ ಸಾಲ್ಯಾನ್, ಪ್ರವೀಣ್ ಕುಲಾಲ್, ನವನೀತ್ ಕುಲಾಲ್ ಹಾಗೂ ದಾಕ್ಷಾಯಿಣಿ ಕುಲಾಲ್ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಸಹಕರಿಸಿದರು.

Hot this week

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

Related Articles

Popular Categories