ಯುಎಇದುಬೈಯ ಕರಾನಿ ಇಂಟೀರಿಯರ್'ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈಯ ಕರಾನಿ ಇಂಟೀರಿಯರ್’ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈ: ದುಬೈಯ ಭಾರತೀಯ ರಾಯಭಾರಿ ಕಚೇರಿ ಮತ್ತು ಏಮ್ ಇಂಡಿಯಾ ಫೋರಂ ಸಂಯುಕ್ತ ಆಶ್ರಯದಲ್ಲಿ ದುಬೈಯ ಕರಾನಿ ಇಂಟೀರಿಯರ್ ಎಲ್‌ಎಲ್‌ಸಿಯಲ್ಲಿ ಕಾರ್ಮಿಕರ ಜಾಗೃತಿ ಅಭಿಯಾನ ಇತ್ತೀಚಿಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವು ಯೋಗಾದೊಂದಿಗೆ ಪ್ರಾರಂಭವಾಯಿತು. ನಂತರ ದುಬೈನ PBSK ವತಿಯಿಂದ ಕಲ್ಯಾಣ ಯೋಜನೆಗಳು ಮತ್ತು ದೂರು ಪರಿಹಾರ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಲಾಯಿತು. ಆರ್ಥಿಕ ವಂಚನೆಗಳ ಕುರಿತು ICAI ದುಬೈ ಶಾಖೆಯವರು ಉಪನ್ಯಾಸ ನೀಡಿದರು.

ಭಾರತೀಯ ರಾಯಭಾರಿ ಕಚೇರಿಯಿಂದ ಕಾರ್ಮಿಕ ಮತ್ತು ಮದದ್ ವಿಭಾಗದ ಕಾನ್ಸುಲ್ ಪಬಿತ್ರ ಮಜುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಮಿಕ ವಿಭಾಗದ ಉಪ ಕಾನ್ಸುಲ್ ದೀಪಕ್ ದಾಗರ್, ಗುರೂಜಿ ರಾಜರಾಮಜಿ, ಸಂತ್ ಕೃಪರಾಮಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏಮ್ ಇಂಡಿಯಾ ಫೋರಂನ ಸಂಸ್ಥಾಪಕ ಅಧ್ಯಕ್ಷ ಶಿರಾಲಿ ಶೈಖ್ ಮುಝಫರ್ ಅವರ ನೇತೃತ್ವದಲ್ಲಿ, ಸಮನ್ವಯಕರಾದ ಮೊಹಮ್ಮದ್ ಅಝೀಮ್ ಮತ್ತು ಉಪಾಧ್ಯಕ್ಷ ಮೊಹಮ್ಮದ್ ನಿಯಾಝ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಆರ್ಥಿಕ ವಂಚನೆಗಳು, ಸೈಬರ್ ಅಪರಾಧಗಳು, ನಕಲಿ ಉದ್ಯೋಗ ಏಜೆನ್ಸಿಗಳು, ಸಿಮ್ ಕಾರ್ಡ್ ವಂಚನೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ದುಬೈಯ ಭಾರತೀಯ ರಾಯಭಾರಿ ಕಚೇರಿಯವರು ಕಾರ್ಮಿಕರ ಹಿತಾಸಕ್ತಿಗಾಗಿ ಏಮ್ ಇಂಡಿಯಾ ಫೋರಂ ಕೈಗೊಂಡಿರುವ ಮಹತ್ವದ ಕಾರ್ಯಗಳಿಗಾಗಿ ಪ್ರಶಂಸೆ ವ್ಯಕ್ತಪಡಿಸಿದರು.

Hot this week

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

ಯಕ್ಷಕಿರೀಟ ಸುಬ್ರಾಯ ಹೊಳ್ಳರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ವತಿಯಿಂದ ‘ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ-2025’

ದುಬೈ: ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU) ವರ್ಷಂ...

Related Articles

Popular Categories