ಯುಎಇದುಬೈಯ ಕರಾನಿ ಇಂಟೀರಿಯರ್'ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈಯ ಕರಾನಿ ಇಂಟೀರಿಯರ್’ನಲ್ಲಿ ಕಾರ್ಮಿಕ ಜಾಗೃತಿ ಅಭಿಯಾನ

ದುಬೈ: ದುಬೈಯ ಭಾರತೀಯ ರಾಯಭಾರಿ ಕಚೇರಿ ಮತ್ತು ಏಮ್ ಇಂಡಿಯಾ ಫೋರಂ ಸಂಯುಕ್ತ ಆಶ್ರಯದಲ್ಲಿ ದುಬೈಯ ಕರಾನಿ ಇಂಟೀರಿಯರ್ ಎಲ್‌ಎಲ್‌ಸಿಯಲ್ಲಿ ಕಾರ್ಮಿಕರ ಜಾಗೃತಿ ಅಭಿಯಾನ ಇತ್ತೀಚಿಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮವು ಯೋಗಾದೊಂದಿಗೆ ಪ್ರಾರಂಭವಾಯಿತು. ನಂತರ ದುಬೈನ PBSK ವತಿಯಿಂದ ಕಲ್ಯಾಣ ಯೋಜನೆಗಳು ಮತ್ತು ದೂರು ಪರಿಹಾರ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಲಾಯಿತು. ಆರ್ಥಿಕ ವಂಚನೆಗಳ ಕುರಿತು ICAI ದುಬೈ ಶಾಖೆಯವರು ಉಪನ್ಯಾಸ ನೀಡಿದರು.

ಭಾರತೀಯ ರಾಯಭಾರಿ ಕಚೇರಿಯಿಂದ ಕಾರ್ಮಿಕ ಮತ್ತು ಮದದ್ ವಿಭಾಗದ ಕಾನ್ಸುಲ್ ಪಬಿತ್ರ ಮಜುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಮಿಕ ವಿಭಾಗದ ಉಪ ಕಾನ್ಸುಲ್ ದೀಪಕ್ ದಾಗರ್, ಗುರೂಜಿ ರಾಜರಾಮಜಿ, ಸಂತ್ ಕೃಪರಾಮಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏಮ್ ಇಂಡಿಯಾ ಫೋರಂನ ಸಂಸ್ಥಾಪಕ ಅಧ್ಯಕ್ಷ ಶಿರಾಲಿ ಶೈಖ್ ಮುಝಫರ್ ಅವರ ನೇತೃತ್ವದಲ್ಲಿ, ಸಮನ್ವಯಕರಾದ ಮೊಹಮ್ಮದ್ ಅಝೀಮ್ ಮತ್ತು ಉಪಾಧ್ಯಕ್ಷ ಮೊಹಮ್ಮದ್ ನಿಯಾಝ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಆರ್ಥಿಕ ವಂಚನೆಗಳು, ಸೈಬರ್ ಅಪರಾಧಗಳು, ನಕಲಿ ಉದ್ಯೋಗ ಏಜೆನ್ಸಿಗಳು, ಸಿಮ್ ಕಾರ್ಡ್ ವಂಚನೆ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ದುಬೈಯ ಭಾರತೀಯ ರಾಯಭಾರಿ ಕಚೇರಿಯವರು ಕಾರ್ಮಿಕರ ಹಿತಾಸಕ್ತಿಗಾಗಿ ಏಮ್ ಇಂಡಿಯಾ ಫೋರಂ ಕೈಗೊಂಡಿರುವ ಮಹತ್ವದ ಕಾರ್ಯಗಳಿಗಾಗಿ ಪ್ರಶಂಸೆ ವ್ಯಕ್ತಪಡಿಸಿದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories